ಬ್ರೇಕಿಂಗ್ ನ್ಯೂಸ್
29-10-20 05:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 29: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ಮುಚ್ಚಿ ಹಾಕಲು ತೆರೆಮರೆಯಲ್ಲಿ ಕಸರತ್ತು ನಡೆಸಿದ ಆರೋಪ ಎದುರಿಸುತ್ತಿರುವ ಪ್ರೊ.ಅರವಿ ಅವರನ್ನು ಸರಕಾರಿ ಸೇವೆಯಿಂದೇ ವಜಾಗೊಳಿಸಲು ಸಿಂಡಿಕೇಟ್ ಸಭೆ ನಿರ್ಧಾರ ಕೈಗೊಂಡಿದೆ.
ಬುಧವಾರ ಮಂಗಳೂರು ವಿವಿಯಲ್ಲಿ ಸಿಂಡಿಕೇಟ್ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ವಿದ್ಯಾರ್ಥಿನಿಗೆ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಗಂಭೀರ ಪ್ರಕರಣವಾಗಿದ್ದು, ಇದಕ್ಕೆ ವೃತ್ತಿ ಬಹಿಷ್ಕಾರ ಶಿಕ್ಷೆಯೇ ಸೂಕ್ತ ಎಂದು ನಿರ್ಣಯಕ್ಕೆ ಬರಲಾಗಿದೆ. ಆದರೆ, ಪ್ರೊಫೆಸರ್ ಆಗಿರುವ ವ್ಯಕ್ತಿಯನ್ನು ನೇರವಾಗಿ ತೆಗೆದು ಹಾಕುವಂತಿಲ್ಲ. ಆ ಕುರಿತು ಅಗತ್ಯ ಪ್ರಕ್ರಿಯೆ ನಡೆಯಬೇಕಾಗಿರುವುದರಿಂದ ಮೊದಲಿಗೆ ವಿವಿಯಿಂದ ನೋಟೀಸ್ ನೀಡಲು ನಿರ್ಧರಿಸಲಾಗಿದೆ.
ಇದೇ ವೇಳೆ, ಮಹಿಳಾ ಆಯೋಗವೂ ಪ್ರೊ.ಅರಬಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರೆ ವಜಾ ಶಿಕ್ಷೆ ತಕ್ಷಣವೇ ಜಾರಿಗೊಳಿಸುವ ಸಾಧ್ಯತೆಯಿದೆ. ಪ್ರೊ.ಅರಬಿ ಸೇವೆಯಿಂದ ವಜಾಗೊಂಡರೆ ಮಂಗಳೂರು ವಿವಿಯಲ್ಲಿ ಪ್ರೊಫೆಸರ್ ವಜಾ ಆಗುತ್ತಿರುವ 2ನೇ ಪ್ರಕರಣ ಇದಾಗಲಿದೆ. 10 ವರ್ಷಗಳ ಹಿಂದೆ ಪ್ರೊ.ತಿಪ್ಪೇಸ್ವಾಮಿ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿತ್ತು.

2018ರಲ್ಲಿ ವಿವಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಅರಬಿ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳು ಕುಲಸಚಿವರಿಗೆ ದೂರು ನೀಡಿದ್ದರು. ಕುಲಸಚಿವರು ನಿರ್ಲಕ್ಷ್ಯ ವಹಿಸಿದ್ದರಿಂದ ಬಳಿಕ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಹಿಳಾ ಆಯೋಗದಿಂದ ಕೂಡಲೇ ಪ್ರಕರಣದ ತನಿಖೆ ನಡೆಸುವಂತೆ ಸೂಚನೆ ಬಂದಿತ್ತು. ಅದರಂತೆ, ಮಹಿಳಾ ಪ್ರೊಫೆಸರ್ ಮತ್ತು ವಕೀಲರನ್ನು ಒಳಗೊಂಡ ಆಂತರಿಕ ತನಿಖಾ ಸಮಿತಿ ರಚಿಸಿ ವಿವಿ ಆಡಳಿತ ವರದಿ ಕೇಳಿತ್ತು. ಆಬಳಿಕ ಮುಚ್ಚಿದ ಲಕೋಟೆಯಲ್ಲಿ ತನಿಖಾ ಸಮಿತಿ ನೀಡಿದ್ದ ವರದಿಯನ್ನು ವಿವಿಯ ಅಂದಿನ ಕುಲಸಚಿವ ಪ್ರೊ.ಎ.ಎಂ. ಖಾನ್, ಇಡೀ ಪ್ರಕರಣ ಮುಚ್ಚಿ ಹಾಕುವ ಸಲುವಾಗಿ ಕಪಾಟಿನಲ್ಲೇ ಇರಿಸಿದ್ದರು.
2020ರ ಸೆಪ್ಟಂಬರ್ ತಿಂಗಳಲ್ಲಿ ಮಹಿಳಾ ಆಯೋಗ ಮತ್ತೆ ನೋಟೀಸ್ ನೀಡಿದ್ದರಿಂದ ಈಗಿನ ಕುಲಸಚಿವ ರಾಜು ಮೊಗವೀರ ಎಚ್ಚತ್ತುಕೊಂಡು ವರದಿಯನ್ನು ಕಳೆದ ಬಾರಿ ಸಿಂಡಿಕೇಟ್ ಸಭೆ ಮುಂದಿರಿಸಿದ್ದರು.
ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಅಂದಿನ ಕುಲಸಚಿವ ಎ.ಎಂ. ಖಾನ್ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ದೂರು ನೀಡುವ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಇದೆ.
Sexual Assault on student Syndicate team decides to terminate professor Arabi from Mangalore University.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am