ಬ್ರೇಕಿಂಗ್ ನ್ಯೂಸ್
29-10-20 05:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 29: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ಮುಚ್ಚಿ ಹಾಕಲು ತೆರೆಮರೆಯಲ್ಲಿ ಕಸರತ್ತು ನಡೆಸಿದ ಆರೋಪ ಎದುರಿಸುತ್ತಿರುವ ಪ್ರೊ.ಅರವಿ ಅವರನ್ನು ಸರಕಾರಿ ಸೇವೆಯಿಂದೇ ವಜಾಗೊಳಿಸಲು ಸಿಂಡಿಕೇಟ್ ಸಭೆ ನಿರ್ಧಾರ ಕೈಗೊಂಡಿದೆ.
ಬುಧವಾರ ಮಂಗಳೂರು ವಿವಿಯಲ್ಲಿ ಸಿಂಡಿಕೇಟ್ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ವಿದ್ಯಾರ್ಥಿನಿಗೆ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಗಂಭೀರ ಪ್ರಕರಣವಾಗಿದ್ದು, ಇದಕ್ಕೆ ವೃತ್ತಿ ಬಹಿಷ್ಕಾರ ಶಿಕ್ಷೆಯೇ ಸೂಕ್ತ ಎಂದು ನಿರ್ಣಯಕ್ಕೆ ಬರಲಾಗಿದೆ. ಆದರೆ, ಪ್ರೊಫೆಸರ್ ಆಗಿರುವ ವ್ಯಕ್ತಿಯನ್ನು ನೇರವಾಗಿ ತೆಗೆದು ಹಾಕುವಂತಿಲ್ಲ. ಆ ಕುರಿತು ಅಗತ್ಯ ಪ್ರಕ್ರಿಯೆ ನಡೆಯಬೇಕಾಗಿರುವುದರಿಂದ ಮೊದಲಿಗೆ ವಿವಿಯಿಂದ ನೋಟೀಸ್ ನೀಡಲು ನಿರ್ಧರಿಸಲಾಗಿದೆ.
ಇದೇ ವೇಳೆ, ಮಹಿಳಾ ಆಯೋಗವೂ ಪ್ರೊ.ಅರಬಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರೆ ವಜಾ ಶಿಕ್ಷೆ ತಕ್ಷಣವೇ ಜಾರಿಗೊಳಿಸುವ ಸಾಧ್ಯತೆಯಿದೆ. ಪ್ರೊ.ಅರಬಿ ಸೇವೆಯಿಂದ ವಜಾಗೊಂಡರೆ ಮಂಗಳೂರು ವಿವಿಯಲ್ಲಿ ಪ್ರೊಫೆಸರ್ ವಜಾ ಆಗುತ್ತಿರುವ 2ನೇ ಪ್ರಕರಣ ಇದಾಗಲಿದೆ. 10 ವರ್ಷಗಳ ಹಿಂದೆ ಪ್ರೊ.ತಿಪ್ಪೇಸ್ವಾಮಿ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿತ್ತು.

2018ರಲ್ಲಿ ವಿವಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಅರಬಿ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳು ಕುಲಸಚಿವರಿಗೆ ದೂರು ನೀಡಿದ್ದರು. ಕುಲಸಚಿವರು ನಿರ್ಲಕ್ಷ್ಯ ವಹಿಸಿದ್ದರಿಂದ ಬಳಿಕ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಹಿಳಾ ಆಯೋಗದಿಂದ ಕೂಡಲೇ ಪ್ರಕರಣದ ತನಿಖೆ ನಡೆಸುವಂತೆ ಸೂಚನೆ ಬಂದಿತ್ತು. ಅದರಂತೆ, ಮಹಿಳಾ ಪ್ರೊಫೆಸರ್ ಮತ್ತು ವಕೀಲರನ್ನು ಒಳಗೊಂಡ ಆಂತರಿಕ ತನಿಖಾ ಸಮಿತಿ ರಚಿಸಿ ವಿವಿ ಆಡಳಿತ ವರದಿ ಕೇಳಿತ್ತು. ಆಬಳಿಕ ಮುಚ್ಚಿದ ಲಕೋಟೆಯಲ್ಲಿ ತನಿಖಾ ಸಮಿತಿ ನೀಡಿದ್ದ ವರದಿಯನ್ನು ವಿವಿಯ ಅಂದಿನ ಕುಲಸಚಿವ ಪ್ರೊ.ಎ.ಎಂ. ಖಾನ್, ಇಡೀ ಪ್ರಕರಣ ಮುಚ್ಚಿ ಹಾಕುವ ಸಲುವಾಗಿ ಕಪಾಟಿನಲ್ಲೇ ಇರಿಸಿದ್ದರು.
2020ರ ಸೆಪ್ಟಂಬರ್ ತಿಂಗಳಲ್ಲಿ ಮಹಿಳಾ ಆಯೋಗ ಮತ್ತೆ ನೋಟೀಸ್ ನೀಡಿದ್ದರಿಂದ ಈಗಿನ ಕುಲಸಚಿವ ರಾಜು ಮೊಗವೀರ ಎಚ್ಚತ್ತುಕೊಂಡು ವರದಿಯನ್ನು ಕಳೆದ ಬಾರಿ ಸಿಂಡಿಕೇಟ್ ಸಭೆ ಮುಂದಿರಿಸಿದ್ದರು.
ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಅಂದಿನ ಕುಲಸಚಿವ ಎ.ಎಂ. ಖಾನ್ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ದೂರು ನೀಡುವ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಇದೆ.
Sexual Assault on student Syndicate team decides to terminate professor Arabi from Mangalore University.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm