ಬ್ರೇಕಿಂಗ್ ನ್ಯೂಸ್
23-05-23 04:52 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದು ಮಹಾಸಭಾ ಕಿಡಿಕಾರಿದ್ದು, ನಳಿನ್ ಅವರಿಗೆ ತಾಕತ್ತಿದ್ರೆ ಪಕ್ಷೇತರರಾಗಿ ಸ್ಪರ್ಧಿಸಲಿ. ಮೋದಿ, ಯೋಗಿ ಹೆಸರು ಎತ್ತದೆ ಚುನಾವಣೆ ಎದುರಿಸಿ ಅರುಣ್ ಪುತ್ತಿಲ ಪಡೆದ ಮತಕ್ಕಿಂತ ಹತ್ತು ಶೇಕಡಾ ಮತ ಪಡೆದು ತೋರಿಸಲಿ ಎಂದು ಹಿಂದೂ ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಅಮೀನ್ ಹೇಳಿದ್ದಾರೆ.
ಅರುಣ್ ಪುತ್ತಿಲ ಅವರ 10% ಮತವನ್ನ ಪಡೆದು ತೋರಿಸಿ, ನಿಮ್ಗೆ ತಾಕತ್ ಇದ್ಯಾ ಅಂತ ನೋಡಿ ಬಿಡೋಣ. ಈ ನಡುವೆ ಹರೀಶ್ ಪೂಂಜಾನಂತ ಓರ್ವ ಶಾಸಕ ಸತ್ಯಜಿತ್, ತಿಮರೋಡಿ ಬಗ್ಗೆ ಮಾತಾಡ್ತಾರೆ. ಅವ್ರ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಬಿಜೆಪಿ ಶಾಸಕರಿಗೆ. ಅಧಿಕಾರ ಸಿಕ್ಕಿದ ಕೂಡ್ಲೇ ಬಾಯಿಗೆ ಬಂದಾಗೆ ಮಾತಾಡೋದು ತಪ್ಪು.
ಪೀಠದಲ್ಲಿ ಕೂರಿಸಿದ್ದೇವೋ, ಹಾಗೆಯೇ ಇಳಿಸೋದು ಗೊತ್ತು, ಹಿಂದೂ ಮಹಾಸಭಾ ಎಚ್ಚರಿಕೆ ಕೊಡ್ತಿದೆ. ನೈತಿಕತೆ ಇದ್ರೆ ಬಿಜೆಪಿ ಶಾಸಕರು ಮೌನವಾಗಿರಿ. ಸಾಧ್ಯವಾದ್ರೆ ಹಿಂದೂ ಕಾರ್ಯಕರ್ತರಿಗೆ, ಹಿಂದುತ್ವವಾದಿಗಳಿಗೆ ಸಹಾಯ ಮಾಡಿ, ಅದು ಬಿಟ್ಟು ಹಿಂಬಾಗಿಲಿನಲ್ಲಿ ಅಧಿಕಾರ ಬಳಸಿ ದೌರ್ಜನ್ಯ ಎಸೆಗೋದು ಮಾಡಿದ್ರೆ ನಾವು ಸುಮ್ಮನಿರಲ್ಲ.
ಎಲ್ಲ ಹಿಂದೂ ಸಂಘಟನೆಗಳನ್ನ ಜೊತೆ ಸೇರಿಸಿಕೊಂಡು ಬಿಜೆಪಿ ವಿರುದ್ಧ ಹೋರಾಟದ ಹಾದಿ ಹಿಡಿಯುತ್ತೇವೆ, 2024ರ ಲೋಕಸಭಾ ಚುನಾವಣೆ ಇದೆ. ನಾವು ಮೋದಿ ನೋಡಿಕೊಂಡು ಸುಮ್ಮನಿದ್ದೇವೆ, ಅದು ಬಿಟ್ಟು ನಿಮ್ಮ ಮುಖ ನೋಡಿ ಸುಮ್ಮನಿರಲ್ಲ. ಇದಕ್ಕೆಲ್ಲ ಉತ್ತರ ಕೊಡೋದಕ್ಕೂ ಬರುತ್ತೆ.
ಯಾವಾನಾದ್ರೂ ಒಬ್ಬ ಶಾಸಕನ ಮಗನಾಗಲಿ ಮಂತ್ರಿಯ ಮಗನಾಗಲಿ ಹೋರಾಟದ ಹಾದಿಯಲ್ಲಿದ್ದಾರಾ..? ಹಾಗಾಗಿ ಎಚ್ಚರಿಕೆ ಕೊಡ್ತಾ ಇದ್ದೇವೆ. ಪುತ್ತೂರಿನ ಪೊಲೀಸ್ ದೌರ್ಜನ್ಯ ಪ್ರಕರಣದಲ್ಲಿ ಸರಿಯಾದ ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಡಿವೈಎಸ್ಪಿ ಅವರನ್ನ ಅಮಾನತು ಮಾಡ್ಬೇಕು. ಇಲ್ಲದಿದ್ದಲ್ಲಿ ನಾವು ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಸುದ್ದಿಗೋಷ್ಟಿಯಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅಮೀನ್ ಎಚ್ಚರಿಕೆ ನೀಡಿದ್ದಾರೆ.
Hindu Mahasabha Dharmendra Nayaka slams BJP Nalin Kateel, challenges if he can get 10 percent of votes of Arun Puthila in Puttur standing as an Independent candidate.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am