ಬ್ರೇಕಿಂಗ್ ನ್ಯೂಸ್
23-05-23 05:28 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಪೊಲೀಸ್ ದೌರ್ಜನ್ಯದಿಂದ ತೀವ್ರ ಹಲ್ಲೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಅವಿನಾಶ್ ಅವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ಬಗ್ಗೆ ವೈದ್ಯರು ವರದಿ ಕೊಟ್ಟಿದ್ದಾರೆ. ಕಿವಿಯ ಸ್ಕ್ಯಾನಿಂಗ್ ವೇಳೆ ತಮಟೆಗೆ ಪೆಟ್ಟು ಬಿದ್ದಿರುವುದು ಕಂಡುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಆನಂತರ, ಮೇ 15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೀಡಾದ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಬಂದಿದ್ದರು. ಇಬ್ಬರು ಕಾರ್ಯಕರ್ತರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಠಾಣೆಯ ಎಸ್ಐ ಮತ್ತು ಪೊಲೀಸ್ ಸಿಬಂದಿ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂಪ್ಯ ಠಾಣೆ ಎಸ್ಐ ಮತ್ತು ಸಿಬಂದಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿತ್ತು.
ತೀವ್ರ ಗಾಯಗೊಂಡಿದ್ದ ಅವಿನಾಶ್ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದ್ದು ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರು ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾಗಿದ್ದು ಎರಡು ದಿನದೊಳಗೆ ಹಲ್ಲೆ ನಡೆಸಿರುವ ಡಿವೈಎಸ್ಪಿ ಅಧಿಕಾರಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕ್ರಮ ಜರುಗಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Puttur Police Autrocity over BJP banner row, Victim Avinash ear drum damaged, Arun Puthila demands DYSP suspension for brutal third degree tortured on seven hindu karyakartas arrested over footwear garland on Nalin Kateel and Sadananada Gowda banner.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am