ಬ್ರೇಕಿಂಗ್ ನ್ಯೂಸ್
24-05-23 01:00 pm Udupi Correspondent ಕರಾವಳಿ
ಉಡುಪಿ, ಮೇ 24: ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಡ್ಡಾದಿಡ್ಡಿ ಕಾರುಗಳನ್ನು ಚಲಾಯಿಸಿ ವಿಡಿಯೋ ಮೀಮ್ಸ್ ಹಾಕಿದ್ದ ನಾಲ್ವರು ಯುವಕರನ್ನು ಕಾಪು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿದ್ದ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿದ್ದಾರೆ.

ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್(24) ಹಾಗೂ ಕುಂಜಿಬೆಟ್ಟು ನಿವಾಸಿ ಮಿಶಾಲುದ್ದೀನ್ (23) ಎಂದು ಗುರುತಿಸಲಾಗಿದೆ. ಇವರ ಮಹೀಂದ್ರಾ ಜೀಪು, ಕ್ರೆಟಾ ಕಾರು, ಫಾರ್ಚುನರ್ ಮತ್ತು ಸ್ವಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಜೀಪು ಹಾಗೂ 3 ಕಾರುಗಳನ್ನು ಅದರ ಚಾಲಕರು ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೋ ವೈರಲ್ ಆಗುತ್ತಿರುವ ಬಗ್ಗೆ ದೂರು ಬಂದಿತ್ತು. ಪರಿಶೀಲಿಸಿದಾಗ ಕಟಪಾಡಿ ಸಮೀಪದ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದ ವರೆಗಿನ ರಾ.ಹೆ. 66ರ ಉಡುಪಿ- ಮಂಗಳೂರು ರಸ್ತೆಯಲ್ಲಿ ಮೇ 19ರಿಂದ ಮೇ 23ರ ನಡುವೆ ವಿಡಿಯೋ ಮಾಡಿರುವುದು ತಿಳಿದುಬಂತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಡಿಯೋದಲ್ಲಿನ ವಾಹನಗಳ ನಂಬ್ರಗಳನ್ನು ಪರಿಶೀಲಿಸಿ ವಾಹನಗಳ ಗುರುತು ಪತ್ತೆ ಹಚ್ಚಿದ ಪೊಲೀಸರು ಚಾಲಕರು ಮತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police booked cases against four drivers, seize cars and arrested them for rash driving and obstructing smooth flow of vehicular traffic on the National Highway 66. The drivers who have been arrested are Ayaan (24) a resident of Guddeyangady Udayavara village, Udupi who was driving a Creta, Mishaluddin (23), a resident of Kunjibettu, Udupi who was driving a Thar, Shanoon D’Souza (25), a resident of Haika Building, Udupi who was driving a fortuner and Vivek (23), a resident of Kodanthur, Udupi who was driving a Swift.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm