ಬ್ರೇಕಿಂಗ್ ನ್ಯೂಸ್
24-05-23 07:24 pm Mangalore Correspondent ಕರಾವಳಿ
ಬಂಟ್ವಾಳ, ಮೇ 24 : ವಿಟ್ಲ ಠಾಣೆ ವ್ಯಾಪ್ತಿಯ ಮಾಣಿ ಜಂಕ್ಷನ್ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿದ್ದಾರೆ. ಪೂರ್ವ ದ್ವೇಷದಲ್ಲಿ ಎರಡೂ ತಂಡಗಳ ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ವೇಳೆ, ಬಿಜೆಪಿ ಕಾರ್ಯಕರ್ತರಿಗೆ ತಲವಾರು ದಾಳಿಯೆಂದು ಸುದ್ದಿ ಹಬ್ಬಿಸಲಾಗಿದ್ದು, ಇದರ ಬೆನ್ನಲ್ಲೇ ಜಿಲ್ಲಾ ಎಸ್ಪಿ ಅಮಾಟೆ ವಿಕ್ರಂ, ತಲವಾರು ದಾಳಿ ನಡೆದಿಲ್ಲ. ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದೆಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಎನ್ನಲಾದ ಮಾಣಿ ಕೋಡಾಜೆ ನಿವಾಸಿ ಮಹೇಂದ್ರ(26) ಮತ್ತು ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್(32) ಪುತ್ತೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ, ಇನ್ನೊಂದು ತಂಡದ ಅನಂತಾಡಿ ನಿವಾಸಿ ಈಶ್ವರ ಯಾನೆ ಪ್ರವೀಣ್ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರತಿ ದೂರು ನೀಡಿದ್ದಾರೆ.
ಇತ್ತೀಚೆಗೆ ಚುನಾವಣೆಯ ವಿಜಯೋತ್ಸವ ನೆಪದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ತಂಡಗಳ ಮಧ್ಯೆ ತಕರಾರು ನಡೆದಿತ್ತು. ಅಂದು ನಡೆದ ಮಾತಿನ ಚಕಮಕಿಯ ಮುಂದುವರಿದ ಭಾಗವಾಗಿ ಹಲ್ಲೆ ನಡೆದಿದೆ ಎನ್ನುವ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ. ಇಂದು ಮಧ್ಯಾಹ್ನ ಬಿಜೆಪಿ ಕಾರ್ಯಕರ್ತರಿಬ್ಬರು ಸ್ಕೂಟರಿನಲ್ಲಿ ಮಾಣಿ ಜಂಕ್ಷನ್ನಿಗೆ ಬಂದಿದ್ದಾಗ, ಓಮ್ನಿ ವ್ಯಾನಲ್ಲಿದ್ದ ವಿರೋಧಿ ತಂಡ ಸ್ಕೂಟರಿಗೆ ಡಿಕ್ಕಿಯಾಗಿಸಿ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿ ಸಿಕ್ಕ ಸಲಾಕೆ ಮಾದರಿಯ ಕಟ್ಟಿಗೆಯ ತುಂಡಿನಲ್ಲಿ ಹಲ್ಲೆ ನಡೆಸಿದ್ದು, ಬಿಜೆಪಿ ಕಾರ್ಯಕರ್ತನೊಬ್ಬನ ತಲೆಗೆ ಪೆಟ್ಟು ಬಿದ್ದಿದೆ. ಯುವಕರು ಕಟ್ಟಿಗೆಯಿಂದ ಹಲ್ಲೆ ನಡೆಸುತ್ತಿದ್ದ ಸಣ್ಣ ವಿಡಿಯೋ ತುಣುಕನ್ನು ಪೊಲೀಸರು ಹಂಚಿಕೊಂಡಿದ್ದಾರೆ.
ಘಟನೆ ಸಂಬಂಧಿಸಿ ಸ್ಥಳೀಯರನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಕಡೆಯಿಂದ ಪ್ರತ್ಯೇಕ ದೂರು ನೀಡಲಾಗಿದೆ. ವಿಟ್ಲ ಪೊಲೀಸರು ಹ್ಲಲೆಗೀಡಾದ ಎರಡೂ ತಂಡಗಳ ಕಾರ್ಯಕರ್ತರಿಂದ ಮಾಹಿತಿ ಪಡೆಯುತ್ತಿದ್ದಾರೆ. ಪೂರ್ವ ದ್ವೇಷದ ಕಾರಣಕ್ಕೆ ಸಣ್ಣ ಮಟ್ಟಿನ ಗಲಾಟೆ ನಡೆದಿದ್ದು, ಅದನ್ನೇ ಕೆಲವರು ತಲವಾರು ದಾಳಿಯೆಂದು ಬಿಂಬಿಸಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Mangalore Clash between congress and BJP, Bajrang Dal workers at Mani, two injured after attack using sticks. According to earlier reports, a fight broke out between BJP and Congress party workers during the victory celebration of the Bantwal MLA. In retaliation, Congress workers attacked BJP and Bajrang Dal workers today.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
07-07-25 12:20 pm
Mangalore Correspondent
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm