ಬ್ರೇಕಿಂಗ್ ನ್ಯೂಸ್
24-05-23 07:24 pm Mangalore Correspondent ಕರಾವಳಿ
ಬಂಟ್ವಾಳ, ಮೇ 24 : ವಿಟ್ಲ ಠಾಣೆ ವ್ಯಾಪ್ತಿಯ ಮಾಣಿ ಜಂಕ್ಷನ್ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿದ್ದಾರೆ. ಪೂರ್ವ ದ್ವೇಷದಲ್ಲಿ ಎರಡೂ ತಂಡಗಳ ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ವೇಳೆ, ಬಿಜೆಪಿ ಕಾರ್ಯಕರ್ತರಿಗೆ ತಲವಾರು ದಾಳಿಯೆಂದು ಸುದ್ದಿ ಹಬ್ಬಿಸಲಾಗಿದ್ದು, ಇದರ ಬೆನ್ನಲ್ಲೇ ಜಿಲ್ಲಾ ಎಸ್ಪಿ ಅಮಾಟೆ ವಿಕ್ರಂ, ತಲವಾರು ದಾಳಿ ನಡೆದಿಲ್ಲ. ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದೆಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಎನ್ನಲಾದ ಮಾಣಿ ಕೋಡಾಜೆ ನಿವಾಸಿ ಮಹೇಂದ್ರ(26) ಮತ್ತು ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್(32) ಪುತ್ತೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ, ಇನ್ನೊಂದು ತಂಡದ ಅನಂತಾಡಿ ನಿವಾಸಿ ಈಶ್ವರ ಯಾನೆ ಪ್ರವೀಣ್ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರತಿ ದೂರು ನೀಡಿದ್ದಾರೆ.

ಇತ್ತೀಚೆಗೆ ಚುನಾವಣೆಯ ವಿಜಯೋತ್ಸವ ನೆಪದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ತಂಡಗಳ ಮಧ್ಯೆ ತಕರಾರು ನಡೆದಿತ್ತು. ಅಂದು ನಡೆದ ಮಾತಿನ ಚಕಮಕಿಯ ಮುಂದುವರಿದ ಭಾಗವಾಗಿ ಹಲ್ಲೆ ನಡೆದಿದೆ ಎನ್ನುವ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ. ಇಂದು ಮಧ್ಯಾಹ್ನ ಬಿಜೆಪಿ ಕಾರ್ಯಕರ್ತರಿಬ್ಬರು ಸ್ಕೂಟರಿನಲ್ಲಿ ಮಾಣಿ ಜಂಕ್ಷನ್ನಿಗೆ ಬಂದಿದ್ದಾಗ, ಓಮ್ನಿ ವ್ಯಾನಲ್ಲಿದ್ದ ವಿರೋಧಿ ತಂಡ ಸ್ಕೂಟರಿಗೆ ಡಿಕ್ಕಿಯಾಗಿಸಿ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿ ಸಿಕ್ಕ ಸಲಾಕೆ ಮಾದರಿಯ ಕಟ್ಟಿಗೆಯ ತುಂಡಿನಲ್ಲಿ ಹಲ್ಲೆ ನಡೆಸಿದ್ದು, ಬಿಜೆಪಿ ಕಾರ್ಯಕರ್ತನೊಬ್ಬನ ತಲೆಗೆ ಪೆಟ್ಟು ಬಿದ್ದಿದೆ. ಯುವಕರು ಕಟ್ಟಿಗೆಯಿಂದ ಹಲ್ಲೆ ನಡೆಸುತ್ತಿದ್ದ ಸಣ್ಣ ವಿಡಿಯೋ ತುಣುಕನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಘಟನೆ ಸಂಬಂಧಿಸಿ ಸ್ಥಳೀಯರನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಕಡೆಯಿಂದ ಪ್ರತ್ಯೇಕ ದೂರು ನೀಡಲಾಗಿದೆ. ವಿಟ್ಲ ಪೊಲೀಸರು ಹ್ಲಲೆಗೀಡಾದ ಎರಡೂ ತಂಡಗಳ ಕಾರ್ಯಕರ್ತರಿಂದ ಮಾಹಿತಿ ಪಡೆಯುತ್ತಿದ್ದಾರೆ. ಪೂರ್ವ ದ್ವೇಷದ ಕಾರಣಕ್ಕೆ ಸಣ್ಣ ಮಟ್ಟಿನ ಗಲಾಟೆ ನಡೆದಿದ್ದು, ಅದನ್ನೇ ಕೆಲವರು ತಲವಾರು ದಾಳಿಯೆಂದು ಬಿಂಬಿಸಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Mangalore Clash between congress and BJP, Bajrang Dal workers at Mani, two injured after attack using sticks. According to earlier reports, a fight broke out between BJP and Congress party workers during the victory celebration of the Bantwal MLA. In retaliation, Congress workers attacked BJP and Bajrang Dal workers today.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm