ಬ್ರೇಕಿಂಗ್ ನ್ಯೂಸ್
26-05-23 02:45 pm Mangalore Correspondent ಕರಾವಳಿ
ಮಂಗಳೂರು, ಮೇ 26 : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿರುವುದು ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ. ಆ ರೀತಿಯ ಹೇಳಿಕೆ ನೀಡಿರುವ ಹರೀಶ್ ಪೂಂಜ ವಿರುದ್ಧ ಶಿಕ್ಷೆಯಾಗಬೇಕು. ಜೊತೆಗೆ, ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಧರ್ಮಾಧರಿತ ಹತ್ಯೆ ಪ್ರಕರಣಗಳನ್ನು ವಿಶೇಷ ತನಿಖೆಗೆ ಗುರಿಪಡಿಸಬೇಕು. ಅದಕ್ಕಾಗಿ ಈ ಹಿಂದೆ ದಕ್ಷಿಣ ಕನ್ನಡ ಎಸ್ಪಿ ಆಗಿದ್ದ ಸುಬ್ರಹ್ಮಣ್ಯೇಶ್ವರ ರಾವ್ ಅವರಂತಹ ದಕ್ಷ ಅಧಿಕಾರಿಯನ್ನು ತನಿಖೆಗೆ ನೇಮಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಈ ಜಿಲ್ಲೆಯಲ್ಲಿ ಅತಿ ಹೆಚ್ಚು ಧರ್ಮಾಧಾರಿತ ಕೊಲೆಗಳಾಗಿರುವುದು ಎಲ್ಲರಿಗು ಗೊತ್ತಿದೆ. ಇದರಿಂದ ಬಹಳಷ್ಟು ಅಮಾಯಕರು ಸಾವಿಗೀಡಾಗಿದ್ದಾರೆ, ಹಿಂದು- ಮುಸ್ಲಿಮರು ಹತ್ಯೆಯಾಗಿದ್ದಾರೆ. ಯಾವುದೇ ಹತ್ಯೆ ಪ್ರಕರಣಗಳಲ್ಲಿ ಒಬ್ಬನೇ ಒಬ್ಬ ಕಾಂಗ್ರೆಸಿನವರು ಆರೋಪಿಗಳಾಗಿಲ್ಲ. ಬಿಜೆಪಿ, ಇತರ ಧಾರ್ಮಿಕ ಸಂಘಟನೆ ಅಥವಾ ಎಸ್ಡಿಪಿಐನವರು ಆರೋಪಿಗಳಿದ್ದಾರೆ. ಇಂಥ ಘಟನೆಗಳಿಗೆ ಯಾರು ಕಾರಣ, ಯಾರು ಪ್ರೇರಣೆ ನೀಡಿದ್ದಾರೆ ಇತ್ಯಾದಿ ವಿಚಾರಗಳು ತನಿಖೆಯಲ್ಲಿ ಹೊರಬರಬೇಕು. ಆಗಮಾತ್ರ ಈ ಭಾಗದಲ್ಲಿ ನಡೆಯುವ ಧರ್ಮ, ಕೋಮು ವೈಷಮ್ಯದ ಕೊಲೆಗಳಿಗೆ ಫುಲ್ ಸ್ಟಾಪ್ ಬೀಳಬಹುದು ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಹತ್ಯೆಗಳಾಗಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಆ ರೀತಿಯ ಲಕ್ಷಣ ಬಂದಿದೆ ಎನ್ನುತ್ತಾರೆ. ಆದರೆ ಅಂತಹ ಕೃತ್ಯ ನಡೆಸುವುದಕ್ಕೆ ಕಾಂಗ್ರೆಸ್ ಸರ್ಕಾರ ಇರುವಾಗಲೇ ಮತೀಯ ಸಂಘಟನೆಗಳು ಮುಂದಾಗಿರುವುದನ್ನು ನೋಡುತ್ತೇವೆ. ಅದಕ್ಕಾಗಿ ಎಲ್ಲ ರೀತಿಯ ಧರ್ಮಾಧಾರಿತ, ರಾಜಕೀಯ ಪ್ರೇರಿತ ಹತ್ಯೆ ಪ್ರಕರಣಗಳನ್ನು ಮರು ತನಿಖೆ ಮಾಡಬೇಕು. ಇವರ ರಾಜಕೀಯ ಮೇಲಾಟದಲ್ಲಿ ಮುಂದಕ್ಕೆ ಈ ರೀತಿ ಆಗಬಾರದಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ವಿಶೇಷ ತನಿಖಾ ತಂಡ ನೇಮಕಕ್ಕೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದರು.
ಮುಖ್ಯಮಂತ್ರಿಯನ್ನು ಗುರಿಯಾಗಿಸಿ ಹೆಸರು ಕೆಡಿಸುವ ಪ್ರಯತ್ನಕ್ಕೆ ಕ್ಷಮೆ ಯಾಚನೆ ಸಾಕಾಗಲ್ಲ, ತಪ್ಪೆಂದು ಕಂಡುಬಂದರೆ ಶಿಕ್ಷೆಯಾಗಬೇಕು. ಶಿಕ್ಷೆಯಾದಲ್ಲಿ ಇಂತಹ ಹೇಳಿಕೆ ನೀಡುವವರಿಗೆ ಪಾಠವಾಗುತ್ತದೆ ಎಂದು ರಮಾನಾಥ ರೈ ಹೇಳಿದರು. ಶಶಿಧರ್ ಹೆಗ್ಡೆ, ನವೀನ್ ಡಿಸೋಜ ಮತ್ತಿತರರಿದ್ದರು.
Mla Harish Poonja should apologise publicly for killing remarks on CM Siddaramaiah says Ramanath Rai in Mangalore. Communal killings in the state should be reinvestigated by former SP of Dakshina Kannada Subramanyashwara Rao
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm