ಬ್ರೇಕಿಂಗ್ ನ್ಯೂಸ್
26-05-23 08:03 pm Mangalore Correspondent ಕರಾವಳಿ
ಉಳ್ಳಾಲ, ಮೇ 26 : ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು.ಟಿ. ಖಾದರ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ಉಳ್ಳಾಲದ ಕೋಡಿ, ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ. ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ ಉಚ್ಚಿಲ- ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಬಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.

ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.

ಸೋಮೇಶ್ವರ ಉಚ್ಚಿಲ, ಬಟ್ಟಂಪಾಡಿ, ಮುಕ್ಕಚ್ಚೇರಿ ಬಳಿಯ ಸೀಗ್ರೌಂಡ್ ನಲ್ಲಿ ಈ ಬಾರಿ ಮಳೆಗೆ ಕಡಲ್ಕೊರೆತಕ್ಕೆ ಮನೆ, ಆಸ್ತಿ, ಪ್ರಾಣಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ತಾತ್ಕಾಲಿಕ ಕಾಮಗಾರಿಗೂ ಆಗ್ರಹಿಸುತ್ತೇನೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಎಮ್.ಆರ್ ರವಿಕುಮಾರ್, ವಿವಿಧ ಇಲಾಖಾ ಅಧಿಕಾರಿಗಳು, ಜನಪ್ರತಿನಿಧಿಗಳು ಜತೆಗಿದ್ದರು.
Mangalore Speaker MLA UT Khader visits Sea erosion affected areas in ullal, orders for quick work before rains.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm