ಬ್ರೇಕಿಂಗ್ ನ್ಯೂಸ್
26-05-23 08:03 pm Mangalore Correspondent ಕರಾವಳಿ
ಉಳ್ಳಾಲ, ಮೇ 26 : ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು.ಟಿ. ಖಾದರ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ಉಳ್ಳಾಲದ ಕೋಡಿ, ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ. ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ ಉಚ್ಚಿಲ- ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಬಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.

ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.

ಸೋಮೇಶ್ವರ ಉಚ್ಚಿಲ, ಬಟ್ಟಂಪಾಡಿ, ಮುಕ್ಕಚ್ಚೇರಿ ಬಳಿಯ ಸೀಗ್ರೌಂಡ್ ನಲ್ಲಿ ಈ ಬಾರಿ ಮಳೆಗೆ ಕಡಲ್ಕೊರೆತಕ್ಕೆ ಮನೆ, ಆಸ್ತಿ, ಪ್ರಾಣಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ತಾತ್ಕಾಲಿಕ ಕಾಮಗಾರಿಗೂ ಆಗ್ರಹಿಸುತ್ತೇನೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಎಮ್.ಆರ್ ರವಿಕುಮಾರ್, ವಿವಿಧ ಇಲಾಖಾ ಅಧಿಕಾರಿಗಳು, ಜನಪ್ರತಿನಿಧಿಗಳು ಜತೆಗಿದ್ದರು.
Mangalore Speaker MLA UT Khader visits Sea erosion affected areas in ullal, orders for quick work before rains.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm