ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm