ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm