ಬ್ರೇಕಿಂಗ್ ನ್ಯೂಸ್
29-05-23 08:18 pm Mangalore Correspondent ಕರಾವಳಿ
ಮಂಗಳೂರು, ಮೇ 29: ತುಳು ಭಾಷೆಯನ್ನು ದ್ವಿತೀಯ ರಾಜ್ಯ ಭಾಷೆಯಾಗಿ ಮಾನ್ಯತೆ ನೀಡುವ ಸಲುವಾಗಿ ಡಾ.ಮೋಹನ ಆಳ್ವಾ ನೇತೃತ್ವದ ಸಮಿತಿಯ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ಬಿಜೆಪಿ ಸರಕಾರ 95 ಶೇಕಡಾ ಕೆಲಸ ಮಾಡಿ ಮುಗಿಸಿದೆ. ಇನ್ನೈದು ಪರ್ಸೆಂಟ್ ಅಷ್ಟೇ ಬಾಕಿಯುಳಿದಿದ್ದು ಅದನ್ನು ಕಾಂಗ್ರೆಸ್ ಸರಕಾರ ಆದಷ್ಟು ಬೇಗ ಮಾಡಲಿ ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪ್ರಮಾಣ ವಚನ ಸಂದರ್ಭದಲ್ಲಿ ತುಳುನಾಡನ್ನು ಪ್ರತಿನಿಧಿಸುವ ಶಾಲು ಹಾಕ್ಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ನಮಗೂ ಮಹದಾಸೆ ಇದೆ. ಆ ನಿಟ್ಟಿನಲ್ಲಿ ನಾವು ತಜ್ಞರ ಸಮಿತಿ ಮಾಡಿ ವರದಿ ಪಡೆದಿದ್ದೇವೆ. ಚುನಾವಣೆಗೂ ಮುನ್ನ ವರದಿಯನ್ನು ಪಡೆಯಲಾಗಿತ್ತು. ಆ ವರದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ನಾವು 95 ಶೇಕಡಾ ಕೆಲಸ ಮುಗಿಸಿದ್ದೇವೆ. ಚುನಾವಣೆ ಘೋಷಣೆ ಆಗಿದ್ದರಿಂದ ಕೊನೆಕ್ಷಣದಲ್ಲಿ ಮಾನ್ಯತೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.
ಬಿಜೆಪಿ ಹೀನಾಯ ಸೋಲಿನ ಬಳಿಕ ವಿಪಕ್ಷ ನಾಯಕನನ್ನು ನೇಮಿಸುವುದಕ್ಕೂ ಆಗಿಲ್ಲವೇ ಎಂಬ ಪ್ರಶ್ನೆಗೆ, ವಿಪಕ್ಷ ನಾಯಕನ ಅಗತ್ಯ ಇರುವುದು ಮುಂದಿನ ಅಧಿವೇಶನಕ್ಕೆ. ಅಲ್ಲಿ ವರೆಗೆ ವಿಪಕ್ಷ ನಾಯಕ ಎಂಬುದು ಬೇಕಿಲ್ಲ. ನಾವೆಲ್ಲ ಬಿಜೆಪಿ ಶಾಸಕರು ವಿಪಕ್ಷದವರೇ. ಜುಲೈ ವೇಳೆಗೆ ಅಧಿವೇಶನ ಆಗೋದಕ್ಕೂ ಮುನ್ನ ವಿಪಕ್ಷ ನಾಯಕರ ನೇಮಕ ಆಗುತ್ತದೆ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕೂಗು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಅದೆಲ್ಲ ನಮಗೆ ಗೊತ್ತಿಲ್ಲ. ಮೇಲಿನವರು ತೀರ್ಮಾನಿಸುವ ವಿಚಾರ ಎಂದು ಹೇಳಿದರು.
Tulu as 2nd official language, report filed by Mohan Alva, let Congress make the final decision says Mla Vedavyas Kamath in Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm