ಬ್ರೇಕಿಂಗ್ ನ್ಯೂಸ್
29-05-23 08:18 pm Mangalore Correspondent ಕರಾವಳಿ
ಮಂಗಳೂರು, ಮೇ 29: ತುಳು ಭಾಷೆಯನ್ನು ದ್ವಿತೀಯ ರಾಜ್ಯ ಭಾಷೆಯಾಗಿ ಮಾನ್ಯತೆ ನೀಡುವ ಸಲುವಾಗಿ ಡಾ.ಮೋಹನ ಆಳ್ವಾ ನೇತೃತ್ವದ ಸಮಿತಿಯ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ಬಿಜೆಪಿ ಸರಕಾರ 95 ಶೇಕಡಾ ಕೆಲಸ ಮಾಡಿ ಮುಗಿಸಿದೆ. ಇನ್ನೈದು ಪರ್ಸೆಂಟ್ ಅಷ್ಟೇ ಬಾಕಿಯುಳಿದಿದ್ದು ಅದನ್ನು ಕಾಂಗ್ರೆಸ್ ಸರಕಾರ ಆದಷ್ಟು ಬೇಗ ಮಾಡಲಿ ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪ್ರಮಾಣ ವಚನ ಸಂದರ್ಭದಲ್ಲಿ ತುಳುನಾಡನ್ನು ಪ್ರತಿನಿಧಿಸುವ ಶಾಲು ಹಾಕ್ಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ನಮಗೂ ಮಹದಾಸೆ ಇದೆ. ಆ ನಿಟ್ಟಿನಲ್ಲಿ ನಾವು ತಜ್ಞರ ಸಮಿತಿ ಮಾಡಿ ವರದಿ ಪಡೆದಿದ್ದೇವೆ. ಚುನಾವಣೆಗೂ ಮುನ್ನ ವರದಿಯನ್ನು ಪಡೆಯಲಾಗಿತ್ತು. ಆ ವರದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ನಾವು 95 ಶೇಕಡಾ ಕೆಲಸ ಮುಗಿಸಿದ್ದೇವೆ. ಚುನಾವಣೆ ಘೋಷಣೆ ಆಗಿದ್ದರಿಂದ ಕೊನೆಕ್ಷಣದಲ್ಲಿ ಮಾನ್ಯತೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.
ಬಿಜೆಪಿ ಹೀನಾಯ ಸೋಲಿನ ಬಳಿಕ ವಿಪಕ್ಷ ನಾಯಕನನ್ನು ನೇಮಿಸುವುದಕ್ಕೂ ಆಗಿಲ್ಲವೇ ಎಂಬ ಪ್ರಶ್ನೆಗೆ, ವಿಪಕ್ಷ ನಾಯಕನ ಅಗತ್ಯ ಇರುವುದು ಮುಂದಿನ ಅಧಿವೇಶನಕ್ಕೆ. ಅಲ್ಲಿ ವರೆಗೆ ವಿಪಕ್ಷ ನಾಯಕ ಎಂಬುದು ಬೇಕಿಲ್ಲ. ನಾವೆಲ್ಲ ಬಿಜೆಪಿ ಶಾಸಕರು ವಿಪಕ್ಷದವರೇ. ಜುಲೈ ವೇಳೆಗೆ ಅಧಿವೇಶನ ಆಗೋದಕ್ಕೂ ಮುನ್ನ ವಿಪಕ್ಷ ನಾಯಕರ ನೇಮಕ ಆಗುತ್ತದೆ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕೂಗು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಅದೆಲ್ಲ ನಮಗೆ ಗೊತ್ತಿಲ್ಲ. ಮೇಲಿನವರು ತೀರ್ಮಾನಿಸುವ ವಿಚಾರ ಎಂದು ಹೇಳಿದರು.
Tulu as 2nd official language, report filed by Mohan Alva, let Congress make the final decision says Mla Vedavyas Kamath in Mangalore.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
07-07-25 12:20 pm
Mangalore Correspondent
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm