ಬ್ರೇಕಿಂಗ್ ನ್ಯೂಸ್
30-05-23 12:00 pm Mangalore Correspondent ಕರಾವಳಿ
ಮಂಗಳೂರು, ಮೇ 30: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡ ಮಸ್ಕತ್ನಲ್ಲೇ ಉದ್ಯೋಗದಲ್ಲಿದ್ದು ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು.
ಆತ್ಮಹತ್ಯೆ ಮಾಡಿಕೊಂಡ ಸಂದೇಶ್ ಸಂಬಂಧಿಯಾದ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಎಂಬ ಯುವಕ ಕೂಡ ಮಸ್ಕತ್ನಲ್ಲಿ ಉದ್ಯೋಗದಲ್ಲಿದ್ದು ಇವರು ಇನ್ನೊಂದು ಕೊಠಡಿಯಲ್ಲಿ ವಾಸವಾಗಿದ್ದಾರೆ. ಬೇಗ ಕರ್ತವ್ಯ ಮುಗಿಸಿ ಬಂದ ಸಂದೇಶ್ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
8 ತಿಂಗಳ ಹಿಂದಷ್ಟೇ ಉದ್ಯೋಗಕ್ಕೆ ತೆರಳಿದ್ದರು
ಸಂತೋಷ್ ಏಳು ವರ್ಷಗಳ ಹಿಂದೆ ಮಸ್ಕತ್ಗೆ ಉದ್ಯೋಗಕ್ಕೆ ತೆರಳಿದ್ದರು. ಮೃತ ಸಂದೇಶ ಕಳೆದ ಕೆಲವು ವರ್ಷಗಳಿಂದ ಚೆನ್ನೈನ ಹೋಟೇಲ್ನಲ್ಲಿ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ವಿಸಿಟಿಂಗ್ ವೀಸಾದಲ್ಲಿ ಮಸ್ಕತ್ಗೆ ತೆರಳಿದ್ದ ಸಂದೇಶ್ ಬಳಿಕ ಅಲ್ಲಿನ ಕೆಲಸದ ವೀಸಾ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯಲ್ಲಿ ಉತ್ತಮ ವೇತನ ಹಾಗೂ ಯಾವುದೇ ಕಿರಿಕಿಯಿಲ್ಲದ ಉದ್ಯೋಗ ಇದ್ದು, ಯಾವುದೇ ಸಮಸ್ಯೆಗಳು ಇರಲಿಲ್ಲ ಎಲ್ಲವೂ ಸುಸೂತ್ರವಾಗಿಯೇ ಇತ್ತು, ಅಣ್ಣ ತಮ್ಮ ಸಂತೋಷವಾಗಿಯೇ ಇದ್ದರು , ಕೇವಲ ಒಂದು ಲೈನ್ ಸ್ವಾರಿ ಅಣ್ಣ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬ ಮೂಲ ತಿಳಿಸಿವೆ.
A youth of Koyila village of the taluk, who was employed overseas, killed himself by hanging on Sunday May 28. The deceased is identified as Sandesh (32), an unmarried youth, son of the late Monappa Poojary, a resident of Sunnadi in Koyila village.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm