ಬ್ರೇಕಿಂಗ್ ನ್ಯೂಸ್
30-05-23 12:00 pm Mangalore Correspondent ಕರಾವಳಿ
ಮಂಗಳೂರು, ಮೇ 30: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡ ಮಸ್ಕತ್ನಲ್ಲೇ ಉದ್ಯೋಗದಲ್ಲಿದ್ದು ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು.
ಆತ್ಮಹತ್ಯೆ ಮಾಡಿಕೊಂಡ ಸಂದೇಶ್ ಸಂಬಂಧಿಯಾದ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಎಂಬ ಯುವಕ ಕೂಡ ಮಸ್ಕತ್ನಲ್ಲಿ ಉದ್ಯೋಗದಲ್ಲಿದ್ದು ಇವರು ಇನ್ನೊಂದು ಕೊಠಡಿಯಲ್ಲಿ ವಾಸವಾಗಿದ್ದಾರೆ. ಬೇಗ ಕರ್ತವ್ಯ ಮುಗಿಸಿ ಬಂದ ಸಂದೇಶ್ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
8 ತಿಂಗಳ ಹಿಂದಷ್ಟೇ ಉದ್ಯೋಗಕ್ಕೆ ತೆರಳಿದ್ದರು
ಸಂತೋಷ್ ಏಳು ವರ್ಷಗಳ ಹಿಂದೆ ಮಸ್ಕತ್ಗೆ ಉದ್ಯೋಗಕ್ಕೆ ತೆರಳಿದ್ದರು. ಮೃತ ಸಂದೇಶ ಕಳೆದ ಕೆಲವು ವರ್ಷಗಳಿಂದ ಚೆನ್ನೈನ ಹೋಟೇಲ್ನಲ್ಲಿ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ವಿಸಿಟಿಂಗ್ ವೀಸಾದಲ್ಲಿ ಮಸ್ಕತ್ಗೆ ತೆರಳಿದ್ದ ಸಂದೇಶ್ ಬಳಿಕ ಅಲ್ಲಿನ ಕೆಲಸದ ವೀಸಾ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯಲ್ಲಿ ಉತ್ತಮ ವೇತನ ಹಾಗೂ ಯಾವುದೇ ಕಿರಿಕಿಯಿಲ್ಲದ ಉದ್ಯೋಗ ಇದ್ದು, ಯಾವುದೇ ಸಮಸ್ಯೆಗಳು ಇರಲಿಲ್ಲ ಎಲ್ಲವೂ ಸುಸೂತ್ರವಾಗಿಯೇ ಇತ್ತು, ಅಣ್ಣ ತಮ್ಮ ಸಂತೋಷವಾಗಿಯೇ ಇದ್ದರು , ಕೇವಲ ಒಂದು ಲೈನ್ ಸ್ವಾರಿ ಅಣ್ಣ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬ ಮೂಲ ತಿಳಿಸಿವೆ.
A youth of Koyila village of the taluk, who was employed overseas, killed himself by hanging on Sunday May 28. The deceased is identified as Sandesh (32), an unmarried youth, son of the late Monappa Poojary, a resident of Sunnadi in Koyila village.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am