ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm