ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am