ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm