ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.
ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.
ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm