ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am