ಬ್ರೇಕಿಂಗ್ ನ್ಯೂಸ್
04-06-23 02:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ನೈತಿಕ ಪೊಲೀಸ್ ಗಿರಿ ಮಾದರಿಯ ಅಪರಾಧ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು ಕಳೆದ ಐದು ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡ ಆರೋಪಿಗಳನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
ಸೋಮೇಶ್ವರದ ನೈತಿಕ ಪೊಲೀಸ್ಗಿರಿ ಘಟನೆ ಹಿನ್ನೆಲೆಯಲ್ಲಿ ಆಯುಕ್ತರನ್ನು ಪ್ರಶ್ನಿಸಿದಾಗ, ಮುಂಜಾಗ್ರತಾ ಕ್ರಮವಾಗಿ ಸಿಆರ್ಪಿಸಿ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು. ಇದುವರೆಗೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಇರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂಘಿಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿ ಮತ್ತೊಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು ಎಂದಿದ್ದಾರೆ.
ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ 9 ಮಂದಿ ನೀಡಿದ್ದ 1.90 ಲಕ್ಷ ರೂ. ಬಾಂಡ್ ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ. ಒಂದು ವರ್ಷದಲ್ಲಿ ಕಮಿಷನರೇಟ್ ವ್ಯಾಪ್ತಿಯ 62 ಮಂದಿ ರೌಡಿಶೀಟರ್ಗಳನ್ನು ಗಡೀಪಾರು ಮಾಡಲಾಗಿದ್ದು ಅವರ ಮೇಲೆ ನಿರಂತರ ನಿಗಾ ಇಡಲಾಗಿದೆ. ರಾಜ್ಯದ ಇತರ ಕಡೆಗಳಿಗೆ ಹೋಲಿಸಿದರೆ ಅತೀ ಹೆಚ್ಚು ಮಂದಿ ರೌಡಿಗಳನ್ನು ಮಂಗಳೂರಿನಿಂದ ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬೀಚ್, ಮಾಲ್ ಗಳಲ್ಲಿ ಗಸ್ತು ಹೆಚ್ಚಳ
ಸೋಮೇಶ್ವರ ಬೀಚ್ನಲ್ಲಿ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಬೀಚ್, ಮಾಲ್ ಸೇರಿದಂತೆ ಜನರು ಹೆಚ್ಚು ಸೇರುವ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲಾಗಿದೆ. ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದು ಕಂಡುಬಂದರೆ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಇದೇ ವೇಳೆ, ಸೋಮೇಶ್ವರದ ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಬಂಧಿಸಿರುವ 7 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ನ್ಯಾಯಾಲಯ ಜೂ.14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಓರ್ವ ಅಪ್ರಾಪ್ತನನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸೊದ್ದು ಮಂಡಳಿಯ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
City police commissioner Kuldeep Kumar Jain informed that people who are involved in moral policing acts in the past are identified and the process of getting bail undertakings signed by them not to involve in such acts in future is in progress.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm