ಬ್ರೇಕಿಂಗ್ ನ್ಯೂಸ್
04-06-23 07:21 pm Mangalore Correspondent ಕರಾವಳಿ
ಉಳ್ಳಾಲ, ಜೂ.4: ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರಿಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಶವಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಆಪ್ತನ ಶವದ ಚಟ್ಟಕ್ಕೆ ಹೆಗಲು ಕೊಟ್ಟು ಸರಳತೆ ಮೆರೆದಿದ್ದಾರೆ.
ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಷಯ ತಿಳಿದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಶರತ್ ಕಾಜವ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಕುಟುಂಬ, ಸಂಬಂಧಿಕರಿಗೆ ಧೈರ್ಯ ತುಂಬಿದ ಅವರು ಅಂತಿಮ ವಿಧಿ ವಿದಾನದಲ್ಲಿ ಪಾಲ್ಗೊಂಡದ್ದಲ್ಲದೆ ಶವದ ಚಟ್ಟಕ್ಕೂ ಹೆಗಲು ಕೊಟ್ಟು ಅಂತಿಮ ಯಾತ್ರೆಯಲ್ಲಿ ಸಾಗಿದ್ದಾರೆ.









ಈ ಮೂಲಕ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿಯವರು ಹಾಕಿಕೊಟ್ಟ ಸಂಪ್ರದಾಯವನ್ನು ಮುಂದುವರಿಸಿದ ಶಾಸಕರು ಎಂಬ ಕೀರ್ತಿಗೆ ಯು.ಟಿ ಖಾದರ್ ಭಾಜನರಾಗಿದ್ದಾರೆ. ನರಿಂಗಾನ ಕಂಬಳ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಮೃತ ಶರತ್ ಕಾಜವ ಅವರು ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಶರತ್ ಕಾಜವ ಅವರು ನರಿಂಗಾನ ಕಂಬಳದ ಯಶಸ್ಸಿಗಾಗಿ ವಾರಗಳ ಕಾಲ ದುಡಿದಿದ್ದರು. ತಾಯಿಯ ಅನಾರೋಗ್ಯ ಇದ್ದಾಗಲೂ ಕಂಬಳದ ಕರೆಯಲ್ಲಿ ಆಗಬೇಕಾದ ವ್ಯವಸ್ಥೆ ಬಗ್ಗೆ ತುಂಬ ಕಾಳಜಿ ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪತ್ನಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Mudipu block congress president brother Sharath dies of heart attack, Speaker Khader helps to carry body for last rites in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm