ಬ್ರೇಕಿಂಗ್ ನ್ಯೂಸ್
05-06-23 11:21 am Mangalore Correspondent ಕರಾವಳಿ
ಉಳ್ಳಾಲ, ಜೂ.5: ಲವ್ ಜಿಹಾದ್ ಭಾಗವಾಗಿ ಹಿಂದು ಯುವತಿಯರೊಂದಿಗೆ ಸೋಮೇಶ್ವರ ಬೀಚಲ್ಲಿ ಮಜಾ ಉಡಾಯಿಸುತ್ತಿದ್ದ ಅನ್ಯಕೋಮಿನ ಯುವಕರಿಗೆ ನೋವಿನಿಂದಲೇ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ. ಹಿಂದೂಗಳು ಪಲಾಯನವಾದಿಗಳಲ್ಲ ,ಹಿಂದೂ ಸಮಾಜ ಕೈಗೆ ಬಳೆ ತೊಟ್ಟಿಲ್ಲ, ಹಿಂದೂ ಸಮಾಜಕ್ಕೆ ಅನ್ಯಾಯವಾದರೆ ಹೋರಾಟಕ್ಕೆ ನಾನು ಸಿದ್ಧ ಎಂದು ಹಿಂದೂ ಫೈರ್ ಬ್ರಾಂಡ್ ಖ್ಯಾತಿಯ ಅರುಣ್ ಪುತ್ತಿಲ ಹೇಳಿದ್ದಾರೆ.
ಅಂಬಿಕಾ ರೋಡ್ ಗಟ್ಟಿ ಸಮಾಜ ಭವನದಲ್ಲಿ ಹಿಂದೂ ಬಾಂಧವರು ಉಳ್ಳಾಲ ಇವರ ನೇತೃತ್ವದಲ್ಲಿ ಜರಗಿದ ಭಾರತ್ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಪೊಲೀಸ್ ಇಲಾಖೆಯು ಜನಪ್ರತಿನಿಧಿಯ ಕೈಗೊಂಬೆಯಂತೆ ವರ್ತಿಸಿದರೆ ಹಿಂದೂ ಸಮಾಜ ಉತ್ತರವನ್ನು ನೀಡಲು ಸಿದ್ಧವಿದೆ. ಸೋಮೇಶ್ವರದ ಘಟನೆಯಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ಹಾಕಲಾಗಿದೆ. ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾದವರಿಗೆ ರಕ್ಷಣೆ ನೀಡಲಾಗಿದೆ. ಕ್ಷೇತ್ರದಲ್ಲಿ ದ್ವೇಷದ ರಾಜಕಾರಣವನ್ನು ಮಾಡದೆ ಪ್ರೀತಿ ವಿಶ್ವಾಸದ ವಾತಾವರಣ ನಿರ್ಮಿಸುವುದು ಇಲ್ಲಿನ ಜನಪ್ರತಿನಿಧಿಯ ಕರ್ತವ್ಯ. ಪೊಲೀಸ್ ಇಲಾಖೆಯೊಳಗೂ ಹಿಂದೂಗಳಿದ್ದಾರೆ. ಜನಸ್ನೇಹಿ ಇಲಾಖೆಯ ಪೊಲೀಸರಿಗೆ ಗೌರವ ಕೊಡುವ ಹೃದಯ ಶ್ರೀಮಂತಿಕೆ ಇರುವ ಸಮಾಜವೆಂದರೆ ಅದು ಹಿಂದೂ ಸಮಾಜವಾಗಿದೆ.




ಧರ್ಮದ, ನಂಬಿಕೆಗಳ ವಿರುದ್ಧದ ಸಂಗತಿಗಳು ನಡೆದರೆ, ಆರಾಧನೆಗಳ ಅಪಮಾನಗಳು ನಡೆದಲ್ಲಿ ಸಾಮಾಜಿಕ ಬದ್ಧತೆಯ ಜೊತೆಗೆ ಹಿಂದುತ್ವವನ್ನು ಪ್ರತಿಪಾದಿಸುವುದು ಅನಿವಾರ್ಯ. ಸೋಮೇಶ್ವರದಲ್ಲೂ ಮೋಜು, ಮಸ್ತಿಗೆ ಹಿಂದೂ ಸಹೋದರಿಯರನ್ನು ಉಪಯೋಗಿಸುವ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ವಿರೋಧ ಮಾಡಿದ್ದಾರೆ. ವಿರೋಧಿಸುವುದು ನಮ್ಮ ಧರ್ಮ, ಸಹೋದರಿಯರ ಅತ್ಯಾಚಾರವನ್ನು ಸಹಿಸಲು ಸಾಧ್ಯವೇ ಇಲ್ಲ. ಉಳ್ಳಾಲದಲ್ಲಿ ಹಿಂದೂ ವಿರೋಧಿ ವಿಚಾರಗಳು ನಡೆದರೆ, ಹಲ್ಲೆಗಳು ನಡೆದರೆ ಮುಂದೆ ನಿಂತು ನ್ಯಾಯ ಒದಗಿಸುತ್ತೇವೆ ಎಂದರು. ಪುತ್ತಿಲ ಪರಿವಾರದ ಗೌರವ ಸಲಹೆಗಾರ ರಾಜಶೇಖರ್, ಉದ್ಯಮಿ ಕಿರಣ್ ಧರ್ಮಸ್ಥಳ, ವಕೀಲರಾದ ಶಿವಾನಂದ್ ವಿಟ್ಲ , ಹಿಂದೂ ಯುವಸೇನೆಯ ಜಯಂತ್ ಕಾಪಿಕಾಡ್, ಗಟ್ಟಿ ಸಮಾಜದ ಅಧ್ಯಕ್ಷ ದಯಾನಂದ್ ಪಿಲಿಕೂರು , ಕಾರ್ಯಕ್ರಮದ ಸಂಘಟಕ ವಕೀಲ ಮಿತೇಶ್ ಪೂಜಾರಿ ಉಪಸ್ಥಿತರಿದ್ದರು.
Mangalore Moral Policing, Revenge for Love Jihad is necessary says Arun Puthila in Ullal speaking at a program.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm