ಬ್ರೇಕಿಂಗ್ ನ್ಯೂಸ್
06-06-23 11:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 6: ರಾಜ್ಯದ ಜನ ಬಿಜೆಪಿ ಮೇಲಿನ ಆಕ್ರೋಶದಿಂದ ನಮಗೆ ಮತ ಹಾಕಿದ್ದಾರೆ. ಕಾಂಗ್ರೆಸ್ ಮತ್ತು ಅದರ ನಾಯಕತ್ವ ನಂಬಿ ನಮಗೆ 135 ಸೀಟ್ ಕೊಟ್ಟಿದ್ದಾರೆ. ನಾವು ಐದು ಗ್ಯಾರಂಟಿ ತಯಾರು ಮಾಡಿ ಕೊಟ್ಟಿದ್ದೆವು. ನಾವೇನು ಗ್ಯಾರಂಟಿ ಘೋಷಣೆಯನ್ನು ಬೇಕಾಬಿಟ್ಟಿ ತೀರ್ಮಾನಿಸಿರಲಿಲ್ಲ. ಹಣಕಾಸು ಖರ್ಚಿನ ಲೆಕ್ಕಾಚಾರ ಮಾಡಿ ಸಾದ್ಯತೆ ಬಳಿಕ ಪ್ರಕಟ ಮಾಡಿದ್ದೆವು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆಗಿದ್ದ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ, ಕಾರ್ಯಕರ್ತರನ್ನುದ್ದೇಶಿ ಪರಮೇಶ್ವರ್ ಭಾಷಣ ಮಾಡಿದರು. ನಾವು ಯಾವುದೇ ಬೇಜವಾಬ್ದಾರಿಯಿಂದ ಗ್ಯಾರಂಟಿ ಘೋಷಣೆ ಮಾಡಿಲ್ಲ. ಕಾಂಗ್ರೆಸ್ ಗ್ಯಾರಂಟಿ ಕೊಟ್ಟು ದಿವಾಳಿ ಮಾಡುತ್ತೆ ಅಂತ ಬಿಜೆಪಿ ಮತ್ತು ಮೋದಿ ಹೇಳ್ತಾ ಇದಾರೆ. ಆದರೆ ನಾವು ಗ್ಯಾರಂಟಿ ಘೋಷಣೆಯನ್ನು ಯಾವುದೇ ಬೇಜವಾಬ್ದಾರಿಯಿಂದ ಮಾಡಿರಲಿಲ್ಲ ಎಂದರು.

ಗೃಹ ಇಲಾಖೆ ನನಗೆ ಈ ಬಾರಿ ಹ್ಯಾಟ್ರಿಕ್ ಸಿಕ್ಕಿದೆ, ಈ ಖಾತೆ ಕೊಟ್ಟಾಗ ನಾನು ಸಿದ್ದರಾಮಯ್ಯರಿಗೆ ಹೇಳಿದೆ. ನಿಮಗೆ ಯಾಕೆ ಇಷ್ಟು ಪ್ರೀತಿ? ಜನರಿಗೆ ಸೇವೆ ಮಾಡಲು ಬೇರೆ ಖಾತೆ ಕೊಡಿ ಅಂದೆ. ಸೆಲ್ಯೂಟ್ , ಸೆಲ್ಯೂಟ್ ಒಂದೇ ಆಯ್ತು ನನಗೆ ಅಂದಿದ್ದೆ. ಆದರೆ ಅವರು ದ.ಕ ಜಿಲ್ಲೆಯರಿಗೆ ನೀವೇ ಹೋಂ ಮಿನಿಸ್ಟರ್ ಆಗಬೇಕು ಅಂದ್ರು.
ಸದ್ಯ ಪೊಲೀಸರ ಸಭೆ ನಡೆಸಿ ಕಠಿಣ ಕ್ರಮಗಳ ಬಗ್ಗೆ ಸೂಚಿಸಿದ್ದೇನೆ. ಯಾವುದೇ ಕಾರಣಕ್ಕೂ ನೈತಿಕ ಪೊಲೀಸ್ ಗಿರಿ ಸಹಿಸಲ್ಲ ಅಂದಿದ್ದೇನೆ. ಪ್ರಣಾಳಿಕೆ ರಚನೆ ವೇಳೆ ಚೇಂಬರ್ ಆಫ್ ಕಾಮರ್ಸ್ ನವರು ಹೇಳಿದ್ದರು. ಕೋಮು ವಿಚಾರದ ಕಾರಣಕ್ಕೆ ಇಲ್ಲಿ ಇನ್ವೆಸ್ಟ್ ಮೆಂಟ್ ಬರಲ್ಲ ಅಂದ್ರು. ಅದಕ್ಕಾಗಿ ಇಲ್ಲಿನ ವಾತಾವರಣ ಬದಲಾಗಬೇಕು. ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಖಡಕ್ ಸೂಚನೆ ಕೊಟ್ಟಿದ್ದೇನೆ.
ಮೊದಲು ಹೇಗೆ ಇದ್ರೋ ಗೊತ್ತಿಲ್ಲ, ಏನೇನ್ ಆಟ ಆಡಿದ್ರೋ ಗೊತ್ತಿಲ್ಲ. ಕೇಸರಿಕರಣ ಮಾಡಿದ್ರೋ ಮತ್ತೊಂದು ಈಗ ನನಗೆ ಅಗತ್ಯ ಇಲ್ಲ. ಆದರೆ ಇನ್ನು ಮುಂದೆ ಪೊಲೀಸರು ಸರಿಯಾಗಿ ಕೆಲಸ ಮಾಡಬೇಕು. ಮಾಡದೇ ಇದ್ರೆ ನಮ್ಮ ಔಷಧಾಲಯದಲ್ಲಿ ಬೇರೆ ಔಷಧಿ ಇದೆ ಎಂದು ಖಡಕ್ಕಾಗಿ ಹೇಳಿದರು. ಮತ್ತೆ ಗೃಹ ಸಚಿವ ಸ್ಥಾನದ ಪೋಸ್ಟ್ ನನಗೇ ಸಿಕ್ಕಿದೆ, ನಾನು ಈ ಜಿಲ್ಲೆಯನ್ನ ಸರಿ ಮಾಡ್ತೇನೆ. ಇಲ್ಲಿ ಕಾಂಗ್ರೆಸ್ ಸೋತಿದೆ ಅನ್ನೋ ಭಾವನೆ ಬೇಡ. ಇವತ್ತು ಅಧಿಕಾರ ಸಿಕ್ಕಿದೆ, ಸರ್ಕಾರ ನಿಮ್ಮ ಸರ್ಕಾರ, ನಿಮ್ಮ ಜೊತೇಲಿ ಇರಲಿದೆ ಎಂದರು.
If Police Department doesn't work duly we have a medicine for them says Home Minister G. Parameshwara in Mangalore.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm