ಬ್ರೇಕಿಂಗ್ ನ್ಯೂಸ್
07-06-23 12:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ಕರಾವಳಿಯಲ್ಲಿ ಇನ್ನೂ ಮಳೆ ಶುರುವಾಗದ ಕಾರಣ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತೀವ್ರ ಜಲಕ್ಷಾಮದಿಂದಾಗಿ ಭಕ್ತರಿಗೆ ಬಿಸಿ ತಟ್ಟಿದೆ. ಕಟೀಲು ದೇಗುಲದಲ್ಲಿ ದಿನವೂ 15ರಿಂದ 20 ಸಾವಿರ ಭಕ್ತರು ಭೇಟಿ ನೀಡುತ್ತಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಇದೆ. ಆದರೆ ಈಗ ನೀರಿನ ಕೊರತೆಯಿಂದಾಗಿ ಸಮಸ್ಯೆ ಎದುರಾಗಿದೆ.
ಊಟಕ್ಕೆ ಪ್ಲೇಟ್ ಬದಲು ಬಳಸಿ ಎಸೆಯುವ ಹಾಳೆ ತಟ್ಟೆ, ಬಾಳೆ ಎಲೆಯನ್ನು ಬಳಸಲಾಗುತ್ತಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಭಕ್ತರು ಕೈಕಾಲು ತೊಳೆಯುವ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ದೇಗುಲದ ಸಮಗ್ರ ವ್ಯವಸ್ಥೆಗೆ ದಿನಂಪ್ರತಿ 7 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು ನೀರು ಸರಬರಾಜು ಮಾಡುತ್ತಿದ್ದ ಬೋರ್ ವೆಲ್ಗಳೂ ಬತ್ತಲಾರಂಭಿಸಿವೆ. ಬೋರ್ ವೆಲ್ನಲ್ಲಿ ಪ್ರತಿ ದಿನ 10ರಿಂದ 15 ನಿಮಿಷ ಮಾತ್ರ ನೀರು ಬರುತ್ತಿದ್ದು, ಖಾಸಗಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೂ ಶೌಚಾಲಯ, ಅತಿಥಿ ಗೃಹಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ.
ಕಟೀಲು ದೇವಸ್ಥಾನಕ್ಕೆ ಸಂಬಂಧಪಟ್ಟ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬಂದಿ ಸೇರಿ ಸುಮಾರು 3 ಸಾವಿರ ಮಂದಿಯಿದ್ದು ನೀರಿನ ಸಮಸ್ಯೆಯಿಂದಾಗಿ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಅರ್ಧ ದಿನಕ್ಕೆ ತರಗತಿಗಳನ್ನು ನಡೆಸಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸಲು ನೀರಿನ ಕೊರತೆ ಎದುರಾಗಿದ್ದರಿಂದ ಅರ್ಧ ದಿನಕ್ಕೆ ಶಾಲೆ ಬಿಡಲಾಗುತ್ತಿದೆ. ಕಟೀಲು ದೇವಸ್ಥಾನದ ಗೋಶಾಲೆಗಳಿಗೂ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ನಲ್ಲಿ ನೀರು ತರಿಸಲಾಗುತ್ತಿದೆ. ದೇವಸ್ಥಾನವನ್ನು ಸುತ್ತುವರಿದು ಹರಿಯುವ ನಂದಿನಿ ನದಿ ಪೂರ್ತಿಯಾಗಿ ಬತ್ತಿ ಹೋಗಿದ್ದು, ನೀರಿನ ಸಂಪನ್ಮೂಲ ಕಂಡುಕೊಳ್ಳಲು ಮತ್ತೆ ಬಾವಿ ಕೊರೆಯಲು ದೇವಸ್ಥಾನದ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಮಳೆ ಬಂದು ನೀರು ತುಂಬಿಕೊಳ್ಳುವ ವರೆಗೂ ಕಟೀಲು ದೇಗುಲದಲ್ಲಿ ನೀರಿಗೆ ಸಮಸ್ಯೆ ಎದುರಾಗಲಿದೆ.
Scorching Summer, no water even to wash hands and legs at Kateel Temple in Mangalore
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am