ಬ್ರೇಕಿಂಗ್ ನ್ಯೂಸ್
07-06-23 02:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ವಾಮಂಜೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಹುಲಿಯೊಂದು ದಿಢೀರ್ ಸಾವನ್ನಪ್ಪಿದ ಘಟನೆ ನಡೆದಿದೆ. ನೇತ್ರಾವತಿ ಹೆಸರಿನ 15 ವರ್ಷ ಪ್ರಾಯದ ಹೆಣ್ಣು ಹುಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಗಿ ಪಿಲಿಕುಳ ಉದ್ಯಾನವನದ ನಿರ್ದೇಶಕ ಜಯಕರ ಭಂಡಾರಿ ತಿಳಿಸಿದ್ದಾರೆ.
ಪಿಲಿಕುಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್ 4ರಂದು ರೇವಾ ಹೆಸರಿನ ಆರು ವರ್ಷ ಪ್ರಾಯದ ಗಂಡು ಹುಲಿ ಬೆದೆಗೆ ಬಂದು ಹೆಣ್ಣು ಹುಲಿಯೊಂದಿಗೆ ಮಿಲನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ಹೆಣ್ಣು ಹುಲಿ, ಗಂಡು ಹುಲಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ, ಎರಡು ಹುಲಿಗಳ ನಡುವೆ ಕಚ್ಚಾಟ ನಡೆದು ಹೆಣ್ಣು ಹುಲಿ ಗಾಯಗೊಂಡಿತ್ತು. ಆನಂತರ, ಹುಲಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಸಾವು ಕಂಡಿದೆ ಎಂದು ಭಂಡಾರಿ ತಿಳಿಸಿದ್ದಾರೆ.

ನೇತ್ರಾವತಿ ಮತ್ತು ರೇವಾ ಹುಲಿಗಳು ಪಿಲಿಕುಳ ಉದ್ಯಾನವನದಲ್ಲಿಯೇ ಜನಿಸಿದ ಹುಲಿಗಳಾಗಿದ್ದು ಸದ್ಯಕ್ಕೆ ಪಿಲಿಕುಳದಲ್ಲಿ ಎಂಟು ಹುಲಿಗಳಿವೆ. ಕಚ್ಚಾಟದಿಂದ ಎರಡೂ ಹುಲಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ. ಆಂತರಿಕ ಗಾಯ ಮತ್ತು ಕಾರಣಗಳನ್ನು ಮರಣೋತ್ತರ ಪರೀಕ್ಷೆಯಿಂದ ತಿಳಿಯಲಾಗುವುದು ಎಂದು ಜಯಕರ ಭಂಡಾರಿ ತಿಳಿಸಿದ್ದಾರೆ. ಗಂಡು ಹುಲಿ ರೇವಾನಿಗೂ ಗಾಯಗಳಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಗಳ ಕಚ್ಚಾಟದಿಂದಲೇ ಸಾವು ಆಗಿದೆಯೇ, ಬಿಸಿಲಿನ ಹೆಚ್ಚಳ ಅಥವಾ ಆಹಾರದ ಕೊರತೆಯಿಂದ ಸಾವು ಸಂಭವಿಸಿದೆಯೇ ಎನ್ನುವ ಕುರಿತಾಗಿಯೂ ಶಂಕೆಗಳಿವೆ.
Tiger killed in tiger battle at Pilikula in Mangalore.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm