ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am