ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.
ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 07:13 pm
Mangalore Correspondent
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm