ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.


ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am