ಬ್ರೇಕಿಂಗ್ ನ್ಯೂಸ್
12-06-23 04:33 pm Mangalore Correspondent ಕರಾವಳಿ
ಉಳ್ಳಾಲ, ಜೂ.12: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಮೃತ ಯುವಕ. ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಣಿಯ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ & ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನ ಜಪ್ತಿ ಗೊಳಿಸಿದ್ದರು.

ಗಂಭೀರ ಗಾಯಗೊಂಡಿದ್ದ ತೇಜಸನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು. ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ ರಾಮ ಕುಲಾಲ್, ತಾಯಿ ರೇವತಿ ಮತ್ತು ಅಣ್ಣ ರವೀಂದ್ರ ಅವರನ್ನ ಅಗಲಿದ್ದಾರೆ.
Mangalore Hit and Run accident at Uchila, bike rider dies in hospital. The deceased has been identified as Tejas Kulal (28).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am