ಬ್ರೇಕಿಂಗ್ ನ್ಯೂಸ್
12-06-23 04:33 pm Mangalore Correspondent ಕರಾವಳಿ
ಉಳ್ಳಾಲ, ಜೂ.12: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಮೃತ ಯುವಕ. ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಣಿಯ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ & ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನ ಜಪ್ತಿ ಗೊಳಿಸಿದ್ದರು.

ಗಂಭೀರ ಗಾಯಗೊಂಡಿದ್ದ ತೇಜಸನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು. ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ ರಾಮ ಕುಲಾಲ್, ತಾಯಿ ರೇವತಿ ಮತ್ತು ಅಣ್ಣ ರವೀಂದ್ರ ಅವರನ್ನ ಅಗಲಿದ್ದಾರೆ.
Mangalore Hit and Run accident at Uchila, bike rider dies in hospital. The deceased has been identified as Tejas Kulal (28).
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm