ಬ್ರೇಕಿಂಗ್ ನ್ಯೂಸ್
13-06-23 02:55 pm HK News Desk ಕರಾವಳಿ
ಉಳ್ಳಾಲ, ಜೂ.13: ಸಾರ್ವಜನಿಕ ಬಾವಿಯಿರುವ ನೂರು ಮೀಟರ್ ವ್ಯಾಪ್ತಿಯೊಳಗಿನ ಖಾಸಗಿ ಜಾಗದಲ್ಲಿ ಕೊಳವೆ ಬಾವಿ ನಿರ್ಮಾಣಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಕುಂಪಲ ಮೂರುಕಟ್ಟೆಯ ಬಲ್ಯ ಎಂಬಲ್ಲಿ ನಡೆದಿದ್ದು, ಸ್ಥಳಕ್ಕೆ ಬಂದ ಕೋಟೆಕಾರು ಪಟ್ಟಣ ಪಂಚಾಯತ್ ಕಿರಿಯ ಅಭಿಯಂತರ ಬೋರ್ ವೆಲ್ ಕಾಮಗಾರಿಯನ್ನ ತಡೆ ಹಿಡಿದಿದ್ದಾರೆ.
ಕುಂಪಲದ ಮೂರುಕಟ್ಟೆ ಬಲ್ಯ ಎಂಬಲ್ಲಿ ಸರ್ವೇ ಸಂಖ್ಯೆ 202/1 ರಲ್ಲಿ ಸಂತೋಷ್ ಪ್ರಭು ಎಂಬವರು ಐದು ಸೆಂಟ್ಸ್ ಜಾಗ ಹೊಂದಿದ್ದು ಇಲ್ಲಿ ಕೊಳವೆ ಬಾವಿ ತೋಡಲು ಕೋಟೆಕಾರು ಪಟ್ಟಣ ಪಂಚಾಯತ್ಗೆ ಮನವಿ ಸಲ್ಲಿಸಿದ್ದರು. ಸರಕಾರಿ ಬಾವಿಯ 500 ಮೀಟರ್ ಒಳಗಡೆ ಕೊಳವೆ ಬಾವಿ ತೋಡಲು ನಿರಾಕ್ಷೇಪಣ ಪತ್ರ ನೀಡಲು ಪಂಚಾಯತಿಗೆ ಅಧಿಕಾರ ಇಲ್ಲದ ಕಾರಣ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿಯವರಿಗೆ ಪಂಚಾಯತ್ ಕಡೆಯಿಂದ ಮನವಿ ನೀಡಲಾಗಿತ್ತು.


ಸ್ಥಳ ಪರಿಶೀಲನೆ ನಡೆಸಿದ್ದ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿ ದಾವೂದ್ ಅವರು ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ವರದಿ ನೀಡಿದ್ದರು. ಹಿರಿಯ ಭೂ ವಿಜ್ಞಾನಿ ದಾವೂದ್ ಅವರ ಶಿಫಾರಸಿನಂತೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಕೆಲ ಷರತ್ತುಗಳೊಂದಿಗೆ ಸಂತೋಷ್ ಪ್ರಭು ಅವರಿಗೆ ಕೊಳವೆ ಬಾವಿ ತೋಡಲು ಅನುಮತಿ ನೀಡಲಾಗಿತ್ತು.
ಅನುಮತಿ ದೊರೆತಂತೆ ಸಂತೋಷ್ ಪ್ರಭು ಅವರು ನಿನ್ನೆ ರಾತ್ರಿಯೇ ತರಾತುರಿಯಲ್ಲಿ ಕೊಳವೆ ಬಾವಿ ಕೊರೆಯಲು ಮುಂದಾಗಿದ್ದರು. ನೀರಿಲ್ಲದೆ ಕಂಗೆಟ್ಟಿದ್ದ ಸ್ಥಳೀಯರು ತೀವ್ರ ಪ್ರತಿರೋಧ ಒಡ್ಡಿದ್ದು ಕಾಮಗಾರಿಯನ್ನ ತಡೆದಿದ್ದಾರೆ. ಇಂದು ಬೆಳಗ್ಗೆ ಕೊಳವೆ ಬಾವಿ ಕಾಮಗಾರಿ ಪ್ರದೇಶಕ್ಕೆ ಕೋಟೆಕಾರು ಪಟ್ಟಣ ಪಂಚಾಯತ್ ಕಿರಿಯ ಅಭಿಯಂತರ ದಿನೇಶ್.ಕೆ ಅವರು ಭೇಟಿ ನೀಡಿ ಜನಾಕ್ರೋಶಕ್ಕೆ ಮಣಿದು ಕಾಮಗಾರಿಯನ್ನ ತಡೆಹಿಡಿದಿದ್ದಾರೆ.

ದಿನೇಶ್ ಕೆ ಅವರು ಪಟ್ಟಣ ಪಂಚಾಯತ್ ಕಚೇರಿಗೆ ಸಂತೋಷ್ ಪ್ರಭು ಮತ್ತು ಸ್ಥಳೀಯರನ್ನ ಕರೆಸಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಂತೋಷ್ ಪ್ರಭು ಅವರು ಜಿಲ್ಲಾಧಿಕಾರಿ ಕಚೇರಿಯ ಷರತ್ತಿನನ್ವಯ ಬೋರ್ ವೆಲ್ ಕೊರೆದು ಸ್ಥಳೀಯರಿಗೆ ನೀರಿನ ಸಮಸ್ಯೆ ಉಂಟಾದಲ್ಲಿ ಪಂಚಾಯತ್ ಮುಖಾಂತರ ರೇಷನಿಂಗ್ ನಡೆಸಿ ಜನರಿಗೆ ನೀರು ಕೊಡುವುದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಭಿಯಂತರರು ಬೋರ್ ವೆಲ್ ಕೊರೆದು ಜನರಿಗೆ ನೀರು ಕೊಡುವುದಾದರೆ ಮೂರು ಸೆಂಟ್ಸ್ ಜಾಗವನ್ನ ಪಂಚಾಯತ್ಗೆ ಕೊಡುವುದಾಗಿ ದಾನ ಪತ್ರ ಬರೆದು ಕೊಡಲು ಹೇಳಿದ್ದಾರೆ. ಇರೋದೇ ಐದು ಸೆಂಟ್ಸ್ ಜಾಗದಲ್ಲಿ ಮೂರು ಸೆಂಟ್ಸ್ ಜಾಗವನ್ನ ದಾನ ನೀಡಿದರೆ ಗತಿಯೇನಂತ ಜಾಗದ ಮಾಲೀಕ ಸಂತೋಷ್ ಪ್ರಭು ಹೇಳಿದ್ದು, ತಾನು ಆ ಜಾಗದಲ್ಲಿ ಬಾವಿಯನ್ನ ಅಗೆಯೋದಾಗಿ ಹೇಳಿದ್ದು ಅದಕ್ಕೆ ಊರವರು ಸಹಕಾರ ನೀಡಬೇಕಾಗಿ ಕೋರಿದ್ದು ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡಿದೆ.
Mangalore Fight over borewell next to water well at Kumpala, borewell work stopped by Panchyath officals
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm