ಬ್ರೇಕಿಂಗ್ ನ್ಯೂಸ್
13-06-23 05:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ರಾಜ್ಯ ಸರಕಾರದ ಉಚಿತ ಬಸ್ ಪ್ರಯಾಣದ ಯೋಜನೆಗೆ ಮಹಿಳೆಯರು ಫಿದಾ ಆಗಿದ್ದಾರೆ. ಮಲೆನಾಡು, ಉತ್ತರ ಕರ್ನಾಟಕ ಭಾಗದ ಜನರು ಸಾಗರೋಪಾದಿಯಾಗಿ ಬಸ್ಸಿನಲ್ಲಿ ಕರಾವಳಿಯತ್ತ ಬರುತ್ತಿದ್ದಾರೆ. ಸರ್ಕಾರಿ ಬಸ್ ಫುಲ್ ರಶ್ ಆಗುತ್ತಿದ್ದು, ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಜನಜಂಗುಳಿ ಏರ್ಪಟ್ಟಿದೆ.
ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಷೇತ್ರಗಳಲ್ಲಿ ಭಾರೀ ರಶ್ ಏರ್ಪಟ್ಟಿದ್ದು ಜನಸಾಗರವೇ ಹರಿದು ಬರುತ್ತಿದೆ. ಮಹಿಳೆಯರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದು, ಕೆಎಸ್ಸಾರ್ಟಿಸಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಾಮಾನ್ಯ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾಗಿತ್ತು. ಅಷ್ಟರಲ್ಲೇ ಹಳ್ಳಿಗಾಡಿನ ಜನರು ಸರ್ಕಾರಿ ಬಸ್ ಹತ್ತ ತೊಡಗಿದ್ದಾರೆ. ಕೋಲಾರ, ಬೆಂಗಳೂರು, ಚಿತ್ರದುರ್ಗ, ತುಮಕೂರು ಅಲ್ಲದೆ, ಉತ್ತರ ಕರ್ನಾಟಕದ ಮಂದಿಯೂ ಅತ್ತಿತ್ತ ರಾಜ್ಯ ಸುತ್ತಲು ಆರಂಭಿಸಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಸರಕಾರಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದ್ದು, ಪೂರ್ತಿ ತುಂಬಿಕೊಂಡೇ ಸಾಗುತ್ತಿವೆ.



ಧರ್ಮಸ್ಥಳಕ್ಕೆ ಬಂದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಬಸ್ಸುಗಳಲ್ಲಿಯೂ ಕಾಲಿಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. ಎಲ್ಲ ಬಸ್ಸುಗಳಲ್ಲಿಯೂ ಪ್ರವಾಸಿ ಮಹಿಳೆಯರೇ ತುಂಬಿಕೊಂಡಿದ್ದು, ಸ್ಥಳೀಯ ಸಾಮಾನ್ಯ ಜನರಿಗೆ ಬಸ್ಸುಗಳಲ್ಲಿ ಪ್ರಯಾಣ ಮಾಡದ ಸ್ಥಿತಿ ಎದುರಾಗಿದೆ. ದೂರದ ಉತ್ತರ ಕರ್ನಾಟಕ ಭಾಗದಿಂದ ಕರಾವಳಿಗೆ ಬರುವುದಕ್ಕೆ ಸಾಮಾನ್ಯವಾಗಿ ಸಾವಿರಾರು ರೂಪಾಯಿ ಬೇಕಿದ್ದರೆ, ಈಗ ಉಚಿತ ಪ್ರಯಾಣದಿಂದಾಗಿ ಹಳ್ಳಿ ಮಹಿಳೆಯರು ಫಿದಾ ಆದಂತಿದ್ದಾರೆ. ಮಕ್ಕಳು, ಇಡೀ ಕುಟುಂಬವನ್ನು ಕಟ್ಟಿಕೊಂಡು ದೇವರ ದರ್ಶನ ಮಾಡ್ಕೊಂಡು ಬರೋಣ ಎಂದು ಜನರೆಲ್ಲ ಯಾತ್ರೆಗೆ ಹೊರಟು ನಿಂತಿದ್ದಾರೆ.
ಜನರ ದಟ್ಟಣೆಯಿಂದಾಗಿ ಪುಣ್ಯಕ್ಷೇತ್ರಗಳು, ಪ್ರವಾಸಿ ಕೇಂದ್ರಗಳಲ್ಲಿ ವ್ಯಾಪಾರವೂ ಜೋರಾಗಿದೆ. ವ್ಯಾಪಾರ ವಹಿವಾಟಿನಿಂದ ಮಾರುಕಟ್ಟೆ ಮತ್ತೆ ಚಿಗಿತುಕೊಂಡು ಹಣದ ಚಲಾವಣೆ ಬಿರುಸು ಪಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಗರಿಗೆದರಿದೆ. ಸಾಮಾನ್ಯವಾಗಿ ಕುಕ್ಕೆ, ಧರ್ಮಸ್ಥಳಗಳಲ್ಲಿ ವೀಕೆಂಡ್ ದಿನಗಳಲ್ಲಿ ಜನರ ಸಂಖ್ಯೆ ಹೆಚ್ಚಿರುತ್ತದೆ. ಇದೀಗ ವಾರದ ನಡುವೆಯೂ ಜನ ಬರಲಾರಂಭಿಸಿದ್ದು ಜನರು ಉಚಿತ ಬಸ್ ನೆಪದಲ್ಲಿ ಎಲ್ಲೆಂದರಲ್ಲಿ ಪ್ರವಾಸ ಹೊರಟಿದ್ದಾರೆ.
Free rides for women in KSRTC, passengers for Dharmasthala and Kukke Temple packed.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm