ಬ್ರೇಕಿಂಗ್ ನ್ಯೂಸ್
13-06-23 10:56 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 13: ಬೆಂಗಳೂರಿಗೆ ಹೋಗುತ್ತೇನೆಂದು ಮೆಸೇಜ್ ಮಾಡಿ ಹೋದ 22 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ ಮೂಡ ಗ್ರಾಮದ ಲೆಕ್ಕೆಸಿರಿ ಪಾದೆ ನಿವಾಸಿ ರಮೇಶ್ ಸಾಲ್ಯಾನ್ ಎಂಬವರ ಪುತ್ರಿ ನೇಹಾ(22) ನಾಪತ್ತೆಯಾದವಳು. ಮಂಗಳೂರಿನಲ್ಲಿ ಸೇಫ್ಟಿ ಇನ್ಸ್ಟ್ರುಮೆಂಟ್ ಶಾಪ್ ನಲ್ಲಿ ಕೆಲಸಕ್ಕಿದ್ದ ನೇಹಾ ಮೇ 27ರಂದು ತಾನು ಬೆಂಗಳೂರಿಗೆ ಹೋಗುತ್ತಿದ್ದೇನೆಂದು ಆಂಟಿ ಒಬ್ಬರಿಗೆ ಮೆಸೇಜ್ ಮಾಡಿದ್ದು, ಆನಂತರ ಫೋನ್ ಸ್ವಿಚ್ ಆಫ್ ಮಾಡಿದ್ದಾಳೆ.
ಮನೆಯವರು ನೇಹಾಗೆ ಮದುವೆ ಮಾಡಲು ರೆಡಿ ಮಾಡುತ್ತಿದ್ದರು. ಹುಡುಗ ನೋಡುವುದಕ್ಕೆ ರೆಡಿ ಮಾಡುತ್ತಿದ್ದರೆ, ನೇಹಾ ಮಾತ್ರ ತಾನು ಈಗ ಮದುವೆಯಾಗುವುದಿಲ್ಲ. ಮತ್ತೆ ಶಿಕ್ಷಣ ಮುಂದುವರಿಸುತ್ತೇನೆ ಎಂದು ನೆಪ ಹೇಳುತ್ತಿದ್ದಳು. ಮೇ 27ರಂದು ಎಂದಿನಂತೆ ಮನೆಯಿಂದ ಕೆಲಸಕ್ಕೆಂದು ಹೋಗಿದ್ದು, ಸಂಜೆ 4 ಗಂಟೆಗೆ ಆಂಟಿಯ ಮೊಬೈಲಿಗೆ ಮೆಸೇಜ್ ಬಂದಿತ್ತು. ನೇಹಾ ಈ ರೀತಿ ನಾಪತ್ತೆಯಾಗಿದ್ದು ಮನೆಯವರನ್ನು ದಿಗಿಲುಗೊಳಿಸಿದೆ.
ಮೇ 29 ಮತ್ತು ಜೂನ್ 6ರಂದು ಮನೆಯವರಿಗೆ ಪತ್ರವೊಂದು ಬಂದಿದ್ದು ತಾನು ಬೆಂಗಳೂರಿನಲ್ಲಿದ್ದೇನೆ. ಹುಡುಕುವ ಪ್ರಯತ್ನ ಬೇಡ ಎಂದು ಬರೆದಿತ್ತು. ಆನಂತರ ಯಾವುದೇ ಮೆಸೇಜ್ ಆಗಲೀ, ಫೋನ್ ಕರೆಯಾಗಲೀ ಬಂದಿಲ್ಲ. ಹೀಗಾಗಿ ನೇಹಾ ನಾಪತ್ತೆ ಆಗಿರುವುದು ಮನೆಯವರನ್ನು ಆತಂಕಕ್ಕೆ ತಳ್ಳಿದೆ. ನಾಪತ್ತೆ ಬಗ್ಗೆ ಆಕೆಯ ತಮ್ಮ ಅವಿನಾಶ್ ಬಂಟ್ವಾಳ ಠಾಣೆಯಲ್ಲಿ ದೂರು ನೀಡಿದ್ದು, ಮೊಬೈಲ್ ಲೊಕೇಶನ್ ಆಧರಿಸಿ ಪತ್ತೆ ಮಾಡುವಂತೆ ಮನವಿ ಮಾಡಿದ್ದಾರೆ.
A young girl has gone missing after sending a message stating that she is going to Bengaluru. A missing person's complaint has been registered at the Bantwal town police station in connection with the incident. The missing girl is Neha (22), daughter of B Muda, a resident of Kasba village in Lekkasiri Pade, Ramesh Salian.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm