ಬ್ರೇಕಿಂಗ್ ನ್ಯೂಸ್
14-06-23 11:58 am Mangalore Correspondent ಕರಾವಳಿ
ಉಳ್ಳಾಲ, ಜೂ.14: ವಾರದ ಹಿಂದೆ ಕುಂಪಲದಲ್ಲಿ ಯುವತಿಯೋರ್ವಳು ತನ್ನ ಹೊಸ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದು ತಲ್ಲಣ ಮೂಡಿಸಿತ್ತು. ಇದೀಗ ವಾರ ಕಳೆಯುವಷ್ಟರಲ್ಲೇ ಇದೇ ಪ್ರದೇಶದ ಮತ್ತೋರ್ವ ಅವಿವಾಹಿತ ಯುವಕ ಕಿನ್ನಿಗೋಳಿಯ ಅಕ್ಕನ ಮನೆಗೆ ತೆರಳಿದ್ದ ವೇಳೆ ಅಕಾಲಿಕ ಸಾವಿಗೀಡಾಗಿದ್ದು ಕುಂಪಲದ ನಿವಾಸಿಗಳನ್ನ ಆತಂಕಕ್ಕೀಡು ಮಾಡಿದೆ. ಕುಂಪಲದ ಸರಣಿ ಸಾವಿಗೆ ಯಾವುದೋ ಅತಿಮಾನುಷ ಶಕ್ತಿ ಕಾರಣವೆಂದು ಹೇಳಲಾಗುತ್ತಿದೆ.
ಕುಂಪಲ ವಿದ್ಯಾನಗರ ನಿವಾಸಿ ಚಂದ್ರಕಾಂತ್(42) ಯಾನೆ ಸಂತು ಮೃತ ವ್ಯಕ್ತಿ. ಚಂದ್ರಕಾಂತ್ ಅವರು ಸ್ಟಿಕ್ಕರ್ ಕಟ್ಟಿಂಗ್, ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದು ತಾಯಿಯೊಂದಿಗೆ ವಿದ್ಯಾನಗರದಲ್ಲಿ ನೆಲೆಸಿದ್ದರು. ಮೂರು ತಿಂಗಳ ಹಿಂದಷ್ಟೆ ಚಂದ್ರಕಾಂತ್ ಅವರ ಭಾವ (ಅಕ್ಕನ ಗಂಡ) ಹೃದಯಾಘಾತದಿಂದ ಅಕಾಲಿಕ ಸಾವನ್ನಪ್ಪಿದ್ದರು. ಭಾವನ ಸಾವಿನಿಂದ ಚಂದ್ರಕಾಂತ್ ಅವರು ತೀವ್ರವಾಗಿ ಮನನೊಂದು ಖಿನ್ನತೆಗೊಳಗಾಗಿದ್ದರು.
ಎರಡು ದಿನಗಳ ಹಿಂದೆ ತಾಯಿಯೊಂದಿಗೆ ಚಂದ್ರಕಾಂತ್ ಕಿನ್ನಿಗೋಳಿಯ ಅಕ್ಕನ ಮನೆಗೆ ತೆರಳಿದ್ದರು. ಸೋಮವಾರ ಬೆಳಗ್ಗೆ ನಿದ್ದೆಯಿಂದ ಎದ್ದ ಅವರು ಚಾಪೆಯನ್ನೂ ಮಡಚದೆ ಬರ್ಮುಡಾದಲ್ಲಿ ತೆರಳಿ ನಾಪತ್ತೆಯಾಗಿದ್ದರು. ಮನೆ ಮಂದಿ ಊರವರು ಸೇರಿ ಹುಡುಕಿದರೂ ಚಂದ್ರಕಾಂತ್ ಸುಳಿವಿರಲಿಲ್ಲ. ಮಂಗಳವಾರ ಮಧ್ಯಾಹ್ನ ವೇಳೆ ಕಿನ್ನಿಗೋಳಿಯ ಹೊಸಕಾವೇರಿಯ ಕಪ್ಪು ಕಲ್ಲಿನ ಕ್ವಾರಿಯ ನೀರಲ್ಲಿ ಚಂದ್ರಕಾಂತ್ ಮೃತದೇಹ ದೊರಕಿದೆ. ಹಳೆಯ ಕ್ವಾರಿಗೆ ಯಾರೂ ತೆರಳದಂತೆ ಸುತ್ತಲು ಬೇಲಿ ಹಾಕಿದ್ದರೂ ಅದನ್ನ ಹಾರಿ ಒಳನುಗ್ಗಿದ ಚಂದ್ರಕಾಂತ್ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.



ಸರಣಿ ಸಾವಿನ ಹಿಂದೆ ಬ್ರಹ್ಮರಾಕ್ಷಸನ ಕರಿಛಾಯೆ ?
ಜೂನ್ 8ರಂದು ಕುಂಪಲದ ಚಿತ್ರಾಂಜಲಿ ನಗರದಲ್ಲಿ ನೂತನ ಮನೆ ಖರೀದಿಸಿದ್ದ ಅಶ್ವಿನಿ ಬಂಗೇರ(25) ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಳು. ಸ್ನೇಹಿತೆಯಿಂದಲೇ ಲೋನ್ ಇದ್ದ ಮನೆ ಖರೀದಿಸಿ ಮೋಸ ಹೋದೆ ಎಂಬ ಕ್ಷುಲ್ಲಕ ಕಾರಣಕ್ಕೆ ಯುವತಿ ಸಾವಿಗೆ ಶರಣಾಗಿದ್ದಳು. ಎರಡು ವರ್ಷಗಳ ಕುಂಪಲದಲ್ಲಿ ನಿಗೂಢ ಸಾವನ್ನಪ್ಪಿದ್ದ ರೂಪದರ್ಶಿ ಪ್ರೇಕ್ಷಾ ಸಾವಿನ ನಂತರ ಈ ಪ್ರದೇಶದಲ್ಲಿ ಅನೇಕ ಅಕಾಲಿಕ ಸಾವುಗಳು ನಡೆದಿವೆ. ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈಯುತ್ತಿದ್ದು, ಇನ್ನು ಕೆಲವರು ಅಪಘಾತ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕುಂಪಲ ಪ್ರದೇಶದಲ್ಲಿ ಬ್ರಹ್ಮರಾಕ್ಷಸನ ಛಾಯೆ ಇರುವುದು ತಾಂಬೂಲ ಪ್ರಶ್ನೆಯಲ್ಲಿ ಕಂಡುಬಂದಿದೆ ಎಂದು ಸ್ಥಳೀಯರು ಹೇಳುತ್ತಾರೆ. ಅಮಾನುಷ ಶಕ್ತಿಯ ನಿರ್ಮೂಲನೆಗಾಗಿ ಚಿತ್ರಾಂಜಲಿ ನಗರದಲ್ಲಿ ಶಕ್ತಿ ದೇವತೆಯ ಕ್ಷೇತ್ರವನ್ನ ನಿರ್ಮಿಸಲು ಉದ್ದೇಶಿಸಲಾಗಿದೆ ಎನ್ನಲಾಗುತ್ತಿದೆ.
Kumpala Missing Mans body found in Stone Quarry at Kinnigoli in Mangalore, rise of suicide increase in Kumpala. Recently a young girl committeed suicide just days after the inauguration of the new house.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm