ಬ್ರೇಕಿಂಗ್ ನ್ಯೂಸ್
14-06-23 09:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಹುಬ್ಬಳ್ಳಿ ಹುಡ್ಗಿ, ಮಂಗ್ಳೂರು ಹುಡ್ಗ ಸೀರಿಯಲ್ ಹಿಂದೊಮ್ಮೆ ಟಿವಿಯಲ್ಲಿ ಹಿಟ್ ಆಗಿ ಮನೆಮಾತಾಗಿತ್ತು. ಈಗ ಅದೇ ರೀತಿ ಹುಬ್ಬಳ್ಳಿಯ ವಿವಾಹಿತ ಗೃಹಿಣಿಯೊಬ್ಬಳು ಪುತ್ತೂರಿನಲ್ಲಿದ್ದ ಪ್ರಿಯಕರನ ಹುಡುಕ್ಕೊಂಡು ಫ್ರೀ ಬಸ್ ಹತ್ಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ತನ್ನ ಹಳೆ ಪ್ರಿಯಕರನ ಜೊತೆಗೆ ನಾಪತ್ತೆಯಾಗಿದ್ದಾಳೆ.
ಹನ್ನೊಂದು ತಿಂಗಳ ಮಗು ಹೊಂದಿರುವ ಹುಬ್ಬಳ್ಳಿ ಮೂಲದ ಮಹಿಳೆ ತನ್ನ ಗಂಡನಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತೇನೆಂದು ಹೇಳಿ ಆಧಾರ್ ಕಾರ್ಡ್ ಹಿಡ್ಕೊಂಡು ಮನೆಯಿಂದ ಹೊರಟಿದ್ದಳು. ಬಳಿಕ ಆಧಾರ್ ಕಾರ್ಡ್ ತೋರಿಸಿ ಉಚಿತ ಸರ್ಕಾರಿ ಬಸ್ ಮೂಲಕ ಹುಬ್ಬಳ್ಳಿಯಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ್ದಾಳೆ. ಆಕೆಯ ಪ್ರಿಯಕರ ಪುತ್ತೂರಿನ ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದ. ಪ್ರಿಯಕರನನ್ನು ನೋಡಲು ಪುತ್ತೂರಿಗೆ ಆಗಮಿಸಿದ ಮಹಿಳೆ, ಆತನ ಜೊತೆಗೆ ಪರಾರಿಯಾಗಿದ್ದಾಳೆ.

ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ, ಅದರ ನಡುವೆಯೂ ತನ್ನ ಹಳೇ ಪ್ರಿಯಕರನ ಒಡನಾಟ ಮುಂದುವರಿಸಿದ್ದಳು. ಅದೇ ಸಲುಗೆಯಲ್ಲಿ ಗಂಡನ ಮೇಲಿನ ಕೋಪದಲ್ಲಿ ಕೈಯಲ್ಲಿ ಹಣ ಇಲ್ಲದಿದ್ದರೂ ಉಚಿತ ಬಸ್ ಪ್ರಯಾಣದ ಅವಕಾಶ ಬಳಸಿ ಪ್ರಿಯಕರನನ್ನು ಹುಡುಕುತ್ತಲೇ ದೂರದ ಪುತ್ತೂರಿಗೆ ಬಂದಿದ್ದಾಳೆ ಎನ್ನಲಾಗಿದೆ.
ಮೂರು ದಿನದಿಂದ ಮಹಿಳೆ ನಾಪತ್ತೆಯಾಗಿದ್ದಲ್ಲದೆ, ಪುತ್ತೂರಿಗೆ ಬಂದಿರೋದು ತಿಳಿಯುತ್ತಲೇ ಹುಬ್ಬಳ್ಳಿಯಿಂದ ಗಂಡನ ಮನೆಯವರು ಹಾಗೂ ಯುವತಿ ಮನೆಯವರು ಆಗಮಿಸಿ, ಮಂಗಳವಾರ ರಾತ್ರಿಯೂ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಯುವತಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಮನೆಯವರು ಇತ್ತ ದಿಕ್ಕಿಲ್ಲದೆ ಹುಡುಕಾಟ ಆರಂಭಿಸಿದ್ದಾರೆ.
ಕಂಗಾಲಾಗಿದ್ದ ಕುಟುಂಬಸ್ಥರಿಗೆ ಸ್ಥಳೀಯ ಕೆಲವರು ಸಹಕಾರ ನೀಡಿದ್ದು ಯುವಕ - ಯುವತಿಯನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ್ದಾರೆ. ಪುತ್ತೂರು ಪೊಲೀಸರಿಗೆ ದೂರು ನೀಡಿ ಟವರ್ ಲೊಕೇಶನ್ ಪತ್ತೆ ಹಚ್ಚಿದಾಗ ಇಬ್ಬರೂ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಮಾಹಿತಿ ಸಿಕ್ಕಿದೆ.
Married Women uses KSRTC free bus service from Hubbali to Puttur to see her boyfriend, and flees with him.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am