ಬ್ರೇಕಿಂಗ್ ನ್ಯೂಸ್
15-06-23 09:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 15: ಅತ್ತ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಇತ್ತ ಸಂಸದ ಸ್ಥಾನಕ್ಕೂ ಕುತ್ತು ಬಂದಿದೆ ಎನ್ನುವಾಗ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಮತ್ತೆ ರಾಜಯೋಗ ಪಡೆಯುವುದಕ್ಕಾಗಿ ಯಾಗದ ಮೊರೆ ಹೋಗಿದ್ದಾರೆ. ನಳಿನ್ ಕುಮಾರ್ ಅವರ ಪುತ್ತೂರು ತಾಲೂಕಿನ ಸವಣೂರು ಬಳಿಯ ಕುಂಜಾಡಿ ಎಂಬಲ್ಲಿನ ತರವಾಡು ಮನೆ ಆವರಣದಲ್ಲಿ ಹೊಸತಾಗಿ ಕಟ್ಟಿಸಿರುವ ಐಷಾರಾಮಿ ಬಂಗಲೆಯಲ್ಲಿ ವಿಶೇಷ ಯಾಗ ಒಂದನ್ನು ಮಾಡುತ್ತಿದ್ದಾರೆ.
ಜೂನ್ 11ರಿಂದ ಆರಂಭಿಸಿ 18ರ ವರೆಗೆ ಈ ಯಾಗ ನಡೆಯಲಿದೆ ಎನ್ನಲಾಗುತ್ತಿದ್ದು, ವಿದ್ವಾನ್ ಬಾಲಕೃಷ್ಣ ಆಚಾರ್ಯ ಎಂಬವರು ನೇತೃತ್ವ ವಹಿಸಿದ್ದಾರೆಂದು ಪುತ್ತೂರಿನ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಯಾಗ ನಡೆಯುತ್ತಿರುವ ಜಾಗಕ್ಕೆ ಹೊರಗಿನ ವ್ಯಕ್ತಿಗಳು ಪ್ರವೇಶ ಮಾಡದಂತೆ ಪೂರ್ತಿಯಾಗಿ ಬಂದೋಬಸ್ತ್ ಮಾಡಲಾಗಿದೆ. ಬಂಗಲೆಯ ಬಳಿ ಐದಾರು ಐಷಾರಾಮಿ ಕಾರುಗಳು ನಿಂತಿದ್ದು, ನಳಿನ್ ಕುಮಾರ್ ಆಪ್ತರು ಮಾತ್ರ ಜೊತೆಗಿದ್ದಾರೆ. 20ಕ್ಕೂ ಹೆಚ್ಚು ಬ್ರಾಹ್ಮಣರು ಸೇರಿಕೊಂಡು ಈ ಯಾಗ ನಡೆಸುತ್ತಿದ್ದಾರೆ. ಆದರೆ ಯಾಗದ ಹೆಸರೇನು, ಇದರ ಉದ್ದೇಶ ಏನೆಂಬುದು ತಿಳಿದುಬಂದಿಲ್ಲ.


ನಳಿನ್ ಕುಮಾರ್ ಹಿಂದೆ ಸಂಸದರಾಗಿ ಆಯ್ಕೆಯಾಗೋದಕ್ಕೂ ಮೊದಲು 2008ರಲ್ಲಿ ಪಾವಂಜೆಯಲ್ಲಿ ಸೌತ್ರಾಮಣಿ ಗವಾಮಯನ ಯಾಗ ನಡೆದಿತ್ತು. ಚಿಕ್ಕಮಗಳೂರಿನ ಕೆಎಸ್ ನಿತ್ಯಾನಂದ ನೇತೃತ್ವದಲ್ಲಿ ವಿಶೇಷ ಯಾಗ ನಡೆದಿದ್ದು, ಯಾಗದ ದೀಕ್ಷೆಯನ್ನು ನಳಿನ್ ಕುಮಾರ್ ಪಡೆದಿದ್ದರು. ಅದರ ಪ್ರಕಾರ, ಅವರಿಗೆ ವಿಶೇಷ ರಾಜಯೋಗ ಸಿಕ್ಕಿತ್ತು ಎನ್ನುವ ಮಾತನ್ನು ನಳಿನ್ ಆಪ್ತರು ಹೇಳುತ್ತಿದ್ದರು. ಸಂಸದರಾಗಿ ಕಳಪೆ ಸಾಧನೆ ಮಾಡಿದ್ದರೂ, ಕಳೆದ ಬಾರಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನವಿರೋಧ ಎದುರಾಗಿದ್ದರೂ ಪ್ರಧಾನಿ ಮೋದಿ ಹೆಸರಲ್ಲಿ ಗೆಲವು ಸಾಧಿಸಿದ್ದರು. ಆನಂತರ, ರಾಜ್ಯಾಧ್ಯಕ್ಷ ಪದವಿಯೂ ಇವರಿಗೆ ಸಿಕ್ಕಿತ್ತು. ರಾಜ್ಯಾಧ್ಯಕ್ಷ ಹುದ್ದೆಯ ಅವಧಿ 2022ರ ಆಗಸ್ಟ್ ನಲ್ಲಿ ಕೊನೆಗೊಂಡಿದ್ದರೂ, ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಇದ್ದುದರಿಂದ ಅವರನ್ನೇ ಮುಂದುವರಿಸಲಾಗಿತ್ತು.

ಈ ಸಲದ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿದ್ದರಿಂದ ಕಾರ್ಯಕರ್ತರು ರಾಜ್ಯಾಧ್ಯಕ್ಷರ ರಾಜಿನಾಮೆಗೆ ಆಗ್ರಹ ಮಾಡಿದ್ದರು. ಸೋಲಿನ ಬಳಿಕ ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆಯಾಗುತ್ತೆ ಎನ್ನುವ ಸುದ್ದಿ ಒಂದು ತಿಂಗಳಿನಿಂದ ಕೇಳಿಬರುತ್ತಿದ್ದರೂ, ಹೈಕಮಾಂಡ್ ಮಟ್ಟದಲ್ಲಿ ಕುಳಿತಿರುವ ಕೆಲವು ವ್ಯಕ್ತಿಗಳು ನಳಿನ್ ಕುಮಾರ್ ಅವರನ್ನು ಬದಲಿಸುವ ಮನಸ್ಸು ಹೊಂದಿಲ್ಲ. ಹೀಗಾಗಿ ಸ್ಥಾನಕ್ಕೆ ಅಂಟಿಕೊಂಡು ಕುಳಿತಿದ್ದಾರೆ. ಈ ವಾರಾಂತ್ಯದಲ್ಲಿ ಹೊಸ ಅಧ್ಯಕ್ಷರ ನೇಮಕ ಆಗುತ್ತೆ ಎನ್ನುವ ವದಂತಿ ಹಬ್ಬಿದ್ದರೂ, ಅಧಿಕೃತ ಆಗಿಲ್ಲ. ಬಿಜೆಪಿ ಕೆಲವು ಮೂಲಗಳ ಪ್ರಕಾರ, ನಳಿನ್ ಕುಮಾರ್ ಯಾಗ ಶತ್ರುಸಂಹಾರದ ಗುರಿ ಹೊಂದಿದೆ ಎನ್ನಲಾಗುತ್ತಿದೆ. ವಿರೋಧಿ ಪಡೆಯನ್ನು ಶಕ್ತಿ ಕುಂದಿಸುವ ನಿಟ್ಟಿನಲ್ಲಿ ಮತ್ತು ಮತ್ತೆ ರಾಜಯೋಗ ಪಡೆಯುವುದು ಯಾಗದ ಗುರಿಯಂತೆ.
Mangalore Bjp Nalin Kateel holds special Yaga at Puttur at his new residence, prayers not to loose his President post as the legislative session in July approaching, the BJP is likely to finalise the names for leader of opposition and party state president by the end of this week. The high command is in favour of a Lingayat-Vokkaliga combination for the top posts, party sources said.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am