ಬ್ರೇಕಿಂಗ್ ನ್ಯೂಸ್
17-06-23 09:22 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ್ಕಾಡಿ ದೇವಂದಪಡ್ಪುವಿನ ಕಿಶನ್ ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದು ತಂದಿದ್ದು ಮನೆಮಂದಿ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಪೊಲೀಸರು ಬೆಂಗಳೂರಿನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.
ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.
Mangalore Bride groom Kishan who went missing on the day oh his Mehandi returns back home. Due to the fear of his girlfriend dropping his marriage he went missing says Kishan. Kishan was traced by Mangalore Police in Bangalore.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 05:48 pm
Mangalore Correspondent
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm