ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 05:48 pm
Mangalore Correspondent
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm