ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am