ಬ್ರೇಕಿಂಗ್ ನ್ಯೂಸ್
19-06-23 11:05 pm Mangalore Correspondent ಕರಾವಳಿ
ಉಳ್ಳಾಲ, ಜೂ.19: ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಸಿದ್ಧರಾಮಯ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿ ರಾಜ್ಯವನ್ನ ಶ್ರೀಲಂಕಾದ ಮಾದರಿಯಲ್ಲಿ ದಿವಾಳಿ ಮಾಡುತ್ತೆ. ಆ್ಯಂಟಿ ಕಮ್ಯುನಲ್ ಪೋರ್ಸ್ ಹೆಸರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನ ಮುಟ್ಟಿದ್ರೆ ನಾವು ಸಮ್ನೆ ಇರಲ್ಲ ಹುಷಾರ್ ಎಂದು ಬಿಜೆಪಿ ನಾಯಕರಾದ ಸತೀಶ್ ಕುಂಪಲ ಮತ್ತು ಸಂತೋಷ್ ಬೋಳಿಯಾರ್ ಎಚ್ಚರಿಸಿದ್ದಾರೆ.
ತೊಕ್ಕೊಟ್ಟಿನ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಬೋಳಿಯಾರ್ ಮಾತನಾಡಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಜಾರಿ ಮಾಡುವಲ್ಲಿ ಗೊಂದಲಕ್ಕೆ ಸಿಲುಕಿದೆ. ಈಗಾಗಲೇ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಮೇಲೆ ಪರಿಣಾಮ ಬೀರಿದೆ. ಉಚಿತ ಪ್ರಯಾಣ ಘೋಷಣೆ ಮಾಡಿದ ಸರ್ಕಾರ ಕೆಎಸ್ಸಾರ್ಟಿಸಿ ಸಿಬ್ಬಂದಿ ವೇತನ ಹೇಗೆ ನೀಡುವುದು ಎಂಬ ಚಿಂತೆಯಲ್ಲಿ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಫ್ರೀ ನಮಗೂ ಫ್ರೀ ನಿಮಗೂ ಫ್ರೀ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಈಗ ಅದನ್ನು ಜಾರಿ ಮಾಡುವ ಉದ್ದೇಶದಿಂದ ಇನ್ನೊಂದೆಡೆ ವಿದ್ಯುತ್ ಬಿಲ್ ಗಗನಕ್ಕೇರಿಸಿದ್ದಾರೆ.10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸರ್ಕಾರ ಈಗ ಮೋದಿ ಕಡೆ ಬೆರಳು ತೋರಿಸುತ್ತಿದೆ. ಮೋದಿ ಸರಕಾರ ಈಗಲೂ ರಾಜ್ಯಕ್ಕೆ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಇದಕ್ಕೆ ರಾಜ್ಯ 10 ಕೆ.ಜಿ ಅಕ್ಕಿ ಸೇರಿಸಿ ಕೊಡಬೇಕು. ಕೊಟ್ಟ ಗ್ಯಾರಂಟಿಯನ್ನ ಕೈ ಸರಕಾರ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮಾತನಾಡಿ ಸಿದ್ಧರಾಮಯ್ಯ ಸರಕಾರ ಯಾವುದೇ ಷರತ್ತಿಲ್ಲದೆ ಟ್ಯಾಕ್ಸಿ, ಇನ್ನಿತರ ಚಾಲಕರಿಗೆ ತಿಂಗಳಿಗೆ 5000 ಮಾಶಾಸನ ಕೊಡುವ ಕಾರ್ಯ ಮಾಡಲಿ. ಸರಕಾರವು ಓಲೈಕೆ ರಾಜಕಾರಣಕ್ಕೆ ಮಣಿದು ಮತಾಂತರ ನಿಷೇಧ ಕಾಯ್ದೆಯನ್ನ ವಾಪಸ್ ತೆಗೆಯುವುದರ ಮೂಲಕ ರಾಜ್ಯದ ಶಾಂತಿ ಸುವ್ಯವಸ್ಥೆಯನ್ನ ಕದಡುವ ಕಾರ್ಯ ಮಾಡುತ್ತಿದೆ. ಆ್ಯಂಟಿ ಕಮ್ಯುನಲ್ ಪೋರ್ಸ್ ಮಾಡಿರುವುದೇ ಹಿಂದುತ್ವದ ಹೋರಾಟಗಾರರನ್ನ ಹತ್ತಿಕ್ಕಲು. ಇದನ್ನ ನಾವು ಖಂಡಿಸುತ್ತೇವೆ. ಹಿಂದೂ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿದರೆ ಸುಮ್ನೆ ಬಿಡಲ್ಲ ಎಂದು ಎಚ್ಚರಿಸಿದರು.
Mangalore Dare to touch Hindus in the name of Anti Communial Wing, warns Satish Kumpala in Ullal. Recently Home Minister had launched Anti communial wing to avoid Moral Policing.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm