ಬ್ರೇಕಿಂಗ್ ನ್ಯೂಸ್
20-06-23 11:30 am Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 20: ಚಾಕೊಲೇಟ್ ಕೊಡಿಸಿಲ್ಲವೆಂದು ತಂದೆಯ ಮೇಲೆ ಸಿಟ್ಟಾದ ಬಾಲಕಿಯರಿಬ್ಬರು ಮನೆ ತೊರೆದು ಸರ್ಕಾರಿ ಬಸ್ಸಿನ ಉಚಿತ ಪ್ರಯಾಣದ ಲಾಭ ಪಡೆದು ಧರ್ಮಸ್ಥಳಕ್ಕೆ ತೆರಳಿದ ಪ್ರಸಂಗ ನಡೆದಿದ್ದು ಮೊಬೈಲ್ ನೆಟ್ವರ್ಕ್ ಆಧರಿಸಿ ಕೋಣನಕುಂಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.
ಕೋಣನಕುಂಟೆ ಠಾಣೆ ವ್ಯಾಪ್ತಿಯ 9 ಹಾಗೂ 11 ವರ್ಷ ವಯಸ್ಸಿನ ಅಕ್ಕ–ತಂಗಿ ಬಾಲಕಿಯರು, ಚಾಕಲೇಟ್ ಖರೀದಿಸುವುದಕ್ಕಾಗಿ ತಂದೆ ಬಳಿ ಹಣ ಕೇಳಿದ್ದರು. ಹಣ ನೀಡದ ತಂದೆ, ಚಾಕೊಲೇಟ್ ತಿನ್ನದಂತೆ ತಾಕೀತು ಮಾಡಿದ್ದರು. ಇದರಿಂದ ಸಿಟ್ಟಿನಲ್ಲಿದ್ದ ಬಾಲಕಿಯರು, ಬೇರೆಯವರ ಬಳಿ ಹಣ ಪಡೆದು ಚಾಕೊಲೇಟ್ ಖರೀದಿಸಿ ತಿಂದಿದ್ದರು. ಬಳಿಕ ತಾವು ಚಾಕೊಲೇಟ್ ತಿಂದಿದ್ದನ್ನು ತಂದೆಗೆ ತಿಳಿಸಿದ್ದರು. ಕೋಪಗೊಂಡ ತಂದೆ, ಮತ್ತಷ್ಟು ಬೈದಿದ್ದರು ಎನ್ನಲಾಗಿದೆ. ಇದರಿಂದ ನೊಂದ ಬಾಲಕಿಯರು, ಮನೆ ಬಿಟ್ಟು ಹೋಗಿದ್ದರು.
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣವೆಂಬುದನ್ನು ತಿಳಿದಿದ್ದ ಬಾಲಕಿಯರು, ಮನೆಯಿಂದ ಬರುವಾಗಲೇ ತಮ್ಮ ಗುರುತಿನ ಚೀಟಿ ಸಮೇತ ಜೂನ್ 16ರಂದು ರಾತ್ರಿ ಮೆಜೆಸ್ಟಿಕ್ ನಿಲ್ದಾಣಕ್ಕೆ ತೆರಳಿದ್ದರು. ಅಲ್ಲಿಂದ ಕೆಎಸ್ಆರ್ಟಿಸಿ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದರು. ತಮ್ಮಲ್ಲಿದ್ದ ಮೊಬೈಲನ್ನೂ ಎತ್ತಿಕೊಂಡು ಹೋಗಿದ್ದರು. ಇತ್ತ ಮಕ್ಕಳು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ಕೋಣನಕುಂಟೆ ಠಾಣೆಗೆ ದೂರು ನೀಡಿದ್ದರು.
ಬಾಲಕಿಯರ ಬಳಿಯಿದ್ದ ಮೊಬೈಲ್ ನೆಟ್ವರ್ಕ್ ಆಧರಿಸಿ ತನಿಖೆ ನಡೆಸಿದಾಗ, ಧರ್ಮಸ್ಥಳದಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಪೊಲೀಸರ ತಂಡ ನೇರವಾಗಿ ಧರ್ಮಸ್ಥಳಕ್ಕೆ ಬಂದು ಬಾಲಕಿಯರನ್ನು ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆತಂದು ಪೋಷಕರಿಗೆ ಒಪ್ಪಿಸಿದೆ.
Angry over father not buying chocolate, sisters travel by free KSRTC bus to Dharmasthala from Belthangady, police trace them by location.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am