ಬ್ರೇಕಿಂಗ್ ನ್ಯೂಸ್
20-06-23 03:10 pm Mangalore Correspondent ಕರಾವಳಿ
ಮಂಗಳೂರು, ಜೂನ್ 20: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಘೋಷಣೆಯಾದ ಹತ್ತು ಕೆಜಿ 'ಅನ್ನಭಾಗ್ಯ' ಯೋಜನೆಗೆ ಕೇಂದ್ರ ಸರಕಾರದ ಅಸಹಕಾರ ಮತ್ತು ಅಕ್ಕಿ ಕೊಡದೆ ವಂಚಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಕ್ಲಾಕ್ ಟವರ್ ಸರ್ಕಲ್ನಲ್ಲಿ ಊಟದ ತಟ್ಟೆಗಳನ್ನು ಹಿಡಿದು ತಟ್ಟೆ ಬಡಿದು ಕಾರ್ಯಕರ್ತರು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯಿಂದ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿ ಅಂತ ಕಾಂಗ್ರೆಸಿಗರು ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ.


ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಇದೇ ವೇಳೆ, ಬಿಜೆಪಿ ನಾಯಕರ ವಿರುದ್ಧ ರಮಾನಾಥ ರೈ ವಾಗ್ದಾಳಿ ನಡೆಸಿದರು. ಈ ಹಿಂದೆ ಮಕ್ಕಳಿಗೆ ಕೊಡುವ ಅನ್ನ ನಿಲ್ಲಿಸಿದ್ದೇನೆಂದು ನನ್ನ ವಿರುದ್ಧ ಬಿಜೆಪಿಯವರು ಅನ್ನದ ತಟ್ಟೆ ಬಡಿದು ಪ್ರತಿಭಟಿಸಿದ್ದರು. ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ಪ್ರತಿ ತಿಂಗಳು ಕಲ್ಲಡ್ಕ ಶಾಲೆಗೆ ಬರುತ್ತಿದ್ದ ಹಣವನ್ನು ತಡೆದಿದ್ದೆವು. ಇದು ಬಿಟ್ಟು ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನೂ ನಿಲ್ಲಿಸಿರಲಿಲ್ಲ.




ಈಗ ನಮ್ಮ ಸರಕಾರದ ಅನ್ನ ಭಾಗ್ಯ ಯೋಜನೆಗೆ ಕೇಂದ್ರದ ಬಿಜೆಪಿ ಸರ್ಕಾರದ ಮೂಲಕ ವಿರೋಧ ಮಾಡಲಾಗಿದೆ. ಕೇಂದ್ರ ಸರಕಾರ ಈ ಯೋಜನೆಯನ್ನ ತಡೆದು ಬಡವರಿಗೆ ದ್ರೋಹ ಮಾಡುತ್ತಿದೆ. ನಮಗೆ ಇಡೀ ರಾಜ್ಯದಲ್ಲಿ ಬಡವರಿಗೆ ಉಚಿತ ಹತ್ತು ಕೇಜಿ ಅಕ್ಕಿ ನೀಡಲು 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ. ಆದರೆ ನಮ್ಮ ಸರಕಾರವನ್ನ ಇಕ್ಕಟ್ಟಿಗೆ ಸಿಲುಕಿಸಬೇಕೆಂದೇ ಬಿಜೆಪಿ ಈ ರೀತಿ ಮಾಡಿದೆ. ಹಿಂದೆ ಯಡಿಯೂರಪ್ಪ ಸರಕಾರ ಇದ್ದಾಗ ಶಾಲೆ ಮಕ್ಕಳಿಗೆ ಸೈಕಲ್ ನೀಡಿದ್ದರು. ಆದರೆ ಒಂದು ವರ್ಷದಲ್ಲಿ ಆ ಸೈಕಲ್ ಒಡೆದು ಮೂಲೆ ಸೇರಿತ್ತು. ಬಿಜೆಪಿ ಸರಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್ ಆಗಿತ್ತು.
ಯಾವುದೇ ಬಿಜೆಪಿ ನಾಯಕರು ತಾವು ನೀಡಿದ್ದ ಭರವಸೆಯನ್ನು ಈವರೆಗೆ ಈಡೇರಿಸಲು ಸಾಧ್ಯವಾಗಿಲ್ಲ. ಹೋರ ದೇಶದಲ್ಲಿರುವ ಕಪ್ಪು ಹಣವನ್ನು ಈವರೆಗೂ ತರಲು ಇವರಿಗೆ ಸಾಧ್ಯವಾಗಿಲ್ಲ. ಸುಳ್ಳು ಹೇಳುವ ಬಿಜೆಪಿ ನಾಯಕರು ಆತ್ಮಹತ್ಯೆ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ರಮಾನಾಥ ರೈ ತೀವ್ರವಾಗಿ ಟೀಕಿಸಿದರು.
Congress leaders staged a protest here at Mini Vidhana Soudha on Tuesday June 20 against the BJP-led central government for ‘denying’ rice for the state's 'Anna Bhagya' scheme which offers 10 kg rice to each member of families living below the poverty line.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm