ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am