ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm