ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm