ಬ್ರೇಕಿಂಗ್ ನ್ಯೂಸ್
21-06-23 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ರಸ್ತೆಗೆ ಅಡ್ಡ ಬಂದಿದ್ದ ಮಹಿಳೆಯನ್ನು ತನ್ನ ಚಾಕಚಕ್ಯತೆಯಿಂದ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಗರಾಜ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.


ವಿಡಿಯೋದಲ್ಲಿ ಬಸ್ ವೇಗವಾಗಿ ಬರುತ್ತಿರುವುದು ದಾಖಲಾಗಿದ್ದು, ಅದನ್ನು ಅನುಸರಿಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೆಂದು ಹೇಳಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆ ಬಸ್ಸನ್ನು ಸೀಜ್ ಮಾಡಿ ಠಾಣೆಗೆ ತಂದು ಇರಿಸಿದ್ದಾರೆ. ಚಾಲಕನ ವಿರುದ್ಧ ಸೆಕ್ಷನ್ 279, 336 ಐಪಿಸಿ ಜೊತೆಗೆ ಮೋಟಾರು ವಾಹನ ಕಾಯ್ದೆ 211-2 ಪ್ರಕಾರ ಕೇಸು ದಾಖಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ನಿರ್ಲಕ್ಷ್ಯದಿಂದ ರಸ್ತೆ ದಾಟುತ್ತಿದ್ದ ಮಹಿಳೆಯ ಪ್ರಾಣ ಉಳಿದಿತ್ತು.
ಎದುರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅನುಸರಿಸಿ ಅಡ್ಡಲಾಗಿ ವಾಹನ ಬರುವುದನ್ನೂ ಲೆಕ್ಕಿಸದೆ ಮುಸ್ಲಿಂ ಮಹಿಳೆಯೊಬ್ಬರು ರಸ್ತೆ ದಾಟಲು ಮುಂದಾಗಿದ್ದರು. ಇದೇ ವೇಳೆ ಬಸ್ ಬಂದಿದ್ದು, ಹಠಾತ್ ಬ್ರೇಕ್ ಹಾಕಿ ಬದಿಗೆ ಸರಿಸಿದ್ದರಿಂದ ಮಹಿಳೆ ಕೂದಲೆಳೆಯಲ್ಲಿ ಬಚಾವ್ ಆಗಿದ್ದರು. ಇದೀಗ ಚಾಲಕನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಖಾಸಗಿ ಬಸ್ಗಳ ಧಾವಂತಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ. ಒಳರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ದುಡುಕುತನ ಮತ್ತು ವೇಗದ ಚಾಲನೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
Police file case against bus that saved womans life while crossing road at Naringana in Mangalore for rash driving.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm