ಬ್ರೇಕಿಂಗ್ ನ್ಯೂಸ್
01-11-20 08:59 pm Mangaluru Correspondent ಕರಾವಳಿ
ಮಂಗಳೂರು, ನ.1: ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬಾಂಬ್ ಸ್ಫೋಟ ಮಾಡಿ ಜನರನ್ನು ಪ್ರಚೋದಿಸಬೇಕೆಂದು ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಹೇಳುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
ಪ್ರತ್ಯೇಕ ತುಳು ರಾಜ್ಯಕ್ಕಾಗಿ ಹೋರಾಟ ಭುಗಿಲೇಳಬೇಕು. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ‘ಬ್ಲಾಸ್ಟ್’ ಮಾಡಬೇಕು. ಟಯರ್ಗಳಿಗೆ ಬೆಂಕಿ ಹಚ್ಚಬೇಕು. ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು ಸೇರಿದಂತೆ ರಾಜಕೀಯ ನಾಯಕರಿಗೆಲ್ಲ ಹಿಗ್ಗಾಮುಗ್ಗ ಬೈಯ್ಯಬೇಕು ಎಂದು ಹೇಳುತ್ತಿರುವುದು ಆಡಿಯೋದಲ್ಲಿದೆ. ತುಳುವಿನಲ್ಲಿ ಯಾರೊಂದಿಗೋ ಮಾತನಾಡುತ್ತಿರುವ ವೇಳೆ ಈ ಆಡಿಯೋ ರೆಕಾರ್ಡ್ ಮಾಡಲಾಗಿದ್ದು ಉದ್ದೇಶಪೂರ್ವಕ ಇದನ್ನು ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಬಿಡಲಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ತುಳು ರಾಜ್ಯಕ್ಕಾಗಿ ಹೋರಾಟ ಆದಲ್ಲಿ ಅಕಾಡಮಿಯವರನ್ನು ಕರೆದು ಸರಕಾರದ ಕಡೆಯಿಂದ ಮಾತುಕತೆ ನಡೆಸುತ್ತಾರೆ. ಆಗ ನಾವು ಹೋರಾಟಗಾರರನ್ನು ಸಮಾಧಾನಿಸಲು ಬೇರೆ ದಾರಿ ಇಲ್ಲ. ತುಳು ರಾಜ್ಯ ಘೋಷಣೆಯೇ ಮಾಡಬೇಕು ಎಂದು ಹೇಳಬಹುದು. ಹೀಗೆಂದು ದಯಾನಂದ್ ಕತ್ತಲ್ಸಾರ್ ಮಾತನಾಡಿದ್ದಾರೆ ಎನ್ನಲಾಗುವ ಆಡಿಯೋ ಇದ್ದು ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿದೆ.

ಸರಕಾರದ ಅಕಾಡಮಿಯ ಅಧ್ಯಕ್ಷರಾಗಿರುವ ವ್ಯಕ್ತಿಯೊಬ್ಬರು ಹೀಗೆ ಹಿಂಸೆಗೆ ಪ್ರಚೋದಿಸುವ ರೀತಿ ಹೇಳಿಕೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಯಾನಂದ ಕತ್ತಲ್ಸಾರ್, ಅದು ತನ್ನದೇ ಆಡಿಯೋ.. ಆದರೆ ಅದನ್ನು ಉದ್ದೇಶಪೂರ್ವಕ ಎಡಿಟ್ ಮಾಡಿ ಬಿಡಲಾಗಿದೆ. ಇದು ನನ್ನ ತೇಜೋವಧೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ.
ತಾನೇ ವೈರಲ್ ಮಾಡಿದ್ದಾಗಿ ಹೇಳಿಕೆ !
ಇದೇ ವೇಳೆ, ಆಡಿಯೋ ಪ್ರಸಾರವನ್ನು ತಾನೇ ಮಾಡಿದ್ದಾಗಿ ತುಳುನಾಡು ಟ್ರಸ್ಟ್ ಅಧ್ಯಕ್ಷ ಜಿ.ವಿ.ಎ ಸ್.ಉಳ್ಳಾಲ್ ಎಂಬವರು ಹೇಳಿದ್ದಾರೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ತುಳುನಾಡು ಸ್ಥಾಪನೆಗಾಗಿ ಈ ರೀತಿ ಪ್ರಚೋದನಾತ್ಮಕವಾಗಿ ನನ್ನ ಜೊತೆಯೇ ಮಾತನಾಡಿದ್ದು. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಹೀಗೆ ಮಾತನಾಡುವುದು ಸರಿಯಲ್ಲ. ಇದೇ ಕಾರಣಕ್ಕೆ ಈ ಮಾತುಕತೆಯ ಆಡಿಯೋವನ್ನು ವೈರಲ್ ಮಾಡಿದ್ದೇನೆ ಎಂದು ಜಿ.ವಿ.ಎಸ್.ಉಳ್ಳಾಲ್ ತಿಳಿಸಿದ್ದಾರೆ.
ತುಳು ಲಿಪಿ ವಿಚಾರವಾಗಿ ದಯಾನಂದ ಕತ್ತಲ್ಸಾರ್ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ಮಾಹಿತಿಗಾಗಿ ಅವರ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡಿದ್ದೆ. ಕತ್ತಲ್ಸಾರ್ ಮಾತನಾಡುತ್ತಾ, ಪ್ರತ್ಯೇಕ ತುಳು ರಾಜ್ಯಕ್ಕಾಗಿ ತುಳುನಾಡು ಟ್ರಸ್ಟ್ ಮೂಲಕ ಹಿಂಸೆಗೆ ಇಳಿಯುವಂತೆ ಹೇಳಿದ್ದರು ಎಂದಿದ್ದಾರೆ.
Tulu Academy President Dayananda Kathalsar lands in trouble for controversial statement of stating to Blast Managluru to make it a complete Tulu speaking District. Audio of this has gone viral on social media.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 08:29 pm
HK News Staffer
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm