ಬ್ರೇಕಿಂಗ್ ನ್ಯೂಸ್
02-11-20 11:01 am Mangalore Correspondent ಕರಾವಳಿ
ಉಳ್ಳಾಲ, ನವೆಂಬರ್ 02: ನಾವು ಯಾವುದೇ ಭಾಷಾ ವಿರೋಧಿಗಳಲ್ಲ. ಎಲ್ಲ ಭಾಷೆಗಳನ್ನು ಗೌರವಿಸುವವರು. ಆದರೆ ಕನ್ನಡ ಸಂಸ್ಕೃತಿಯನ್ನು ಅಳಿಸುವ ಪ್ರಯತ್ನ ಸಹಿಸಲು ಅಸಾಧ್ಯ ಎಂದು ಮಂಗಳೂರು ಹರಿಕಥಾ ಪರಿಷತ್ ನ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಅಭಿಪ್ರಾಯಪಟ್ಟರು. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ತೊಕ್ಕೊಟ್ಟಿನ ಖಾಸಗಿ ಸಭಾಂಗಣದಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ರಾಜ್ಯೋತ್ಸವದಂತಹ ಉತ್ಸವಗಳನ್ನು ಬಹಳ ಉತ್ಸಾಹದಿಂದ ಆಚರಿಸುವಂತಾಗಬೇಕು. ಕರ್ನಾಟಕದ ಅವಿಭಾಜ್ಯ ಅಂಗ ಕಾಸರಗೋಡು. ಅದು ಪುನಶ್ಚೇತನಗೊಂಡು ನಮ್ಮೊಂದಿಗೆ ಸೇರುವ ಅವಶ್ಯಕತೆ ಇದೆ. ಆಂಗ್ಲ ಭಾಷೆಯನ್ನು ಕನ್ನಡದೊಂದಿಗೆ ಮಿಶ್ರಣಗೊಳಿಸಿ ಸಂಸ್ಕೃತಿ ನಾಶಗೊಳಿಸಲಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಗಳು ಇದನ್ನು ಸರಿಪಡಿಸಲು ಪ್ರಯತ್ನಿಸಿದರೂ ಆ ಪ್ರಯತ್ನಗಳು ಸಂಪೂರ್ಣಗೊಳ್ಳಲಿಲ್ಲ. ಕನ್ನಡದ ಉದ್ದಾರ, ಸಾಹಿತ್ಯ , ಸಂಸ್ಕೃತಿ ಅನುಷ್ಠಾನಕ್ಕಾಗಿ ದುಡಿಯುವ ಹೊಣೆಗಾರಿಕೆ ಮಂದಿನ ಯುವಪೀಳಿಗೆಯದ್ದು ಎಂದರು.
ನಿವೃತ್ತ ಶಿಕ್ಷಕರಾದ ವಾಸುದೇವರಾವ್ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕರಾದ ರತ್ನಾವತಿ ಜೆ ಬೈಕಾಡಿ, ನಿವೃತ್ತ ಅಂಗನವಾಡಿ ಶಿಕ್ಷಕಿ ಶಶಿಕಲಾ ಗಟ್ಟಿ, ನಿವೃತ್ತ ಪ್ರಾಚಾರ್ಯರಾದ ಲಲಿತಾ ಕೆ ಆಚಾರ್ ಅವರನ್ನು ಸನ್ಮಾನಿಸಲಾಯಿತು.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್, ಉತ್ಸವ ಸಮಿತಿ ಸ್ವಾಗತಾಧ್ಯಕ್ಷ ಮಾಜಿ ಶಾಸಕ ಕೆ ಜಯರಾಮ ಶೆಟ್ಟಿ, ಗೌರವ ಉಪಾಧ್ಯಕ್ಷರಾದ ಸದಾನಂದ ಬಂಗೇರ, ಹೈದರ್ ಪರ್ತಿಪ್ಪಾಡಿ, ಕೋಶಾಧಿಕಾರಿ ಆನಂದ ಕೆ ಅಸೈಗೋಳಿ, ದ.ಕ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಕೆ.ಎಂ.ಕೆ ಮಂಜನಾಡಿ, ಅಬ್ದುಲ್ ಅಜೀಜ್ ಹಕ್ ಮೊದಲಾದವರು ಇದ್ದರು.
Need to take efforts to save Kannada culture and language stated Harikata Parishath President Mahabala Shetty on the occasion of kannada rajyotsava 2020 function held at Ullal.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm